Homeಕರ್ನಾಟಕಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

ಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ನಿಯಮ ಮತ್ತು ನಿಬಂಧನೆ ನಿಗದಿಪಡಿಸಿ, 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಆಯೋಗಕ್ಕೆ ನಿಗದಿ ಮಾಡಿರುವ ಹೊಣೆಗಾರಿಕೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಕಚೇರಿ ವ್ಯವಸ್ಥೆ, ವಾಹನ, ಸಿಬ್ಬಂದಿ ಮತ್ತು ಇತರ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಒದಗಿಸಿಕೊಡಲಿದ್ದಾರೆ ಎಂದು ಆದೇಶ ಹೇಳಿದೆ.

ವರದಿ ಸಿದ್ದಪಡಿಸಲು ಅಗತ್ಯವಿರುವ ದಾಖಲೆಗಳನ್ನು ಮತ್ತು ಪುರಾವೆಗಳನ್ನು ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಲ್ಲಿಸಬೇಕು ಮತ್ತು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ನಿಯಮ ಮತ್ತು ನಿಬಂಧನೆಗಳಲ್ಲಿ ಉಲ್ಲೇಖಿಸಲಾದ ಎಲ್ಲ ಅಂಶಗಳ ಬಗ್ಗೆ ದತ್ತಾಂಶಗಳು ಮತ್ತು ಅಗತ್ಯ ಶಿಫಾರಸುಗಳನ್ನು ನೀಡಬೇಕು. ಆಯೋಗವು ಅಧಿಕಾರ ವಹಿಸಿಕೊಂಡ 60 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದಿದೆ.

ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ  ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಎಸ್ ಸಿಯಲ್ಲಿನ ಉಪ ಗುಂಪುಗಳಲ್ಲಿ ‘ಅಂತರ ಹಿಂದುಳಿದಿರುವಿಕೆ’ ಕುರಿತು ದತ್ತಾಂಶ  ಸಂಗ್ರಹಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳಷ್ಟೇ ರಾಜ್ಯದ  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿವೆ. ಜನಸಂಖ್ಯೆಯನ್ನು ಹೀಗೆ ವಿಂಗಡಿಸಲಾಗಿದೆ. ಈ ಮೂರೂ ಹೆಸರುಗಳಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ಪರಿಣಾಮಕಾರಿ ಅನುಷ್ಠಾನ ವಿಧಾನದ ಪರಿಶೀಲನೆ ಹಾಗೂ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳು ಮೀಸಲು ಪ್ರಯೋಜನವನ್ನು ಸಮಾನವಾಗಿ ಪಡೆಯುತ್ತಿವೆಯೇ ಎಂಬುದರ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಯಮ ನಿಬಂಧನೆಗಳು

*ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ, ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ

*ಪರಿಶಿಷ್ಟ ಜಾತಿಗಳ ಉಪುಗುಂಪುಗಳಲ್ಲಿ ‘ಅಂತರ್‌ ಹಿಂದುಳಿದಿರುವಿಕೆ’’ಗುರುತಿಸುವುದು ಮತ್ತು ಇದಕ್ಕಾಗಿ ದತ್ತಾಂಶ ಸಂಗ್ರಹ

*ಮೀಸಲಾತಿ ಪ್ರಮಾಣ ನಿಗದಿಪಡಿಸುವ ಬಗ್ಗೆ ಪರಿಶೀಲನೆ

*ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳ ಅಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ದತ್ತಾಂಶಗಳ ಸಂಗ್ರಹ

*ಒಳಮೀಸಲಾತಿಯ ಪರಿಣಾಮಕಾರಿ ಜಾರಿಯ ಪರಿಶೀಲನೆ

*ಪರಿಶಿಷ್ಟ ಜಾತಿಯಲ್ಲಿ  ಉಪ ಗುಂಪುಗಳ ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಕುರಿತು ಪರಿಶೀಲನೆ

ಇದನ್ನೂ ಓದಿ…ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...