Homeಕರ್ನಾಟಕಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

ಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ನಿಯಮ ಮತ್ತು ನಿಬಂಧನೆ ನಿಗದಿಪಡಿಸಿ, 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಆಯೋಗಕ್ಕೆ ನಿಗದಿ ಮಾಡಿರುವ ಹೊಣೆಗಾರಿಕೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಕಚೇರಿ ವ್ಯವಸ್ಥೆ, ವಾಹನ, ಸಿಬ್ಬಂದಿ ಮತ್ತು ಇತರ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಒದಗಿಸಿಕೊಡಲಿದ್ದಾರೆ ಎಂದು ಆದೇಶ ಹೇಳಿದೆ.

ವರದಿ ಸಿದ್ದಪಡಿಸಲು ಅಗತ್ಯವಿರುವ ದಾಖಲೆಗಳನ್ನು ಮತ್ತು ಪುರಾವೆಗಳನ್ನು ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಲ್ಲಿಸಬೇಕು ಮತ್ತು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ನಿಯಮ ಮತ್ತು ನಿಬಂಧನೆಗಳಲ್ಲಿ ಉಲ್ಲೇಖಿಸಲಾದ ಎಲ್ಲ ಅಂಶಗಳ ಬಗ್ಗೆ ದತ್ತಾಂಶಗಳು ಮತ್ತು ಅಗತ್ಯ ಶಿಫಾರಸುಗಳನ್ನು ನೀಡಬೇಕು. ಆಯೋಗವು ಅಧಿಕಾರ ವಹಿಸಿಕೊಂಡ 60 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದಿದೆ.

ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ  ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಎಸ್ ಸಿಯಲ್ಲಿನ ಉಪ ಗುಂಪುಗಳಲ್ಲಿ ‘ಅಂತರ ಹಿಂದುಳಿದಿರುವಿಕೆ’ ಕುರಿತು ದತ್ತಾಂಶ  ಸಂಗ್ರಹಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳಷ್ಟೇ ರಾಜ್ಯದ  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿವೆ. ಜನಸಂಖ್ಯೆಯನ್ನು ಹೀಗೆ ವಿಂಗಡಿಸಲಾಗಿದೆ. ಈ ಮೂರೂ ಹೆಸರುಗಳಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ಪರಿಣಾಮಕಾರಿ ಅನುಷ್ಠಾನ ವಿಧಾನದ ಪರಿಶೀಲನೆ ಹಾಗೂ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳು ಮೀಸಲು ಪ್ರಯೋಜನವನ್ನು ಸಮಾನವಾಗಿ ಪಡೆಯುತ್ತಿವೆಯೇ ಎಂಬುದರ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಯಮ ನಿಬಂಧನೆಗಳು

*ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ, ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ

*ಪರಿಶಿಷ್ಟ ಜಾತಿಗಳ ಉಪುಗುಂಪುಗಳಲ್ಲಿ ‘ಅಂತರ್‌ ಹಿಂದುಳಿದಿರುವಿಕೆ’’ಗುರುತಿಸುವುದು ಮತ್ತು ಇದಕ್ಕಾಗಿ ದತ್ತಾಂಶ ಸಂಗ್ರಹ

*ಮೀಸಲಾತಿ ಪ್ರಮಾಣ ನಿಗದಿಪಡಿಸುವ ಬಗ್ಗೆ ಪರಿಶೀಲನೆ

*ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳ ಅಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ದತ್ತಾಂಶಗಳ ಸಂಗ್ರಹ

*ಒಳಮೀಸಲಾತಿಯ ಪರಿಣಾಮಕಾರಿ ಜಾರಿಯ ಪರಿಶೀಲನೆ

*ಪರಿಶಿಷ್ಟ ಜಾತಿಯಲ್ಲಿ  ಉಪ ಗುಂಪುಗಳ ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಕುರಿತು ಪರಿಶೀಲನೆ

ಇದನ್ನೂ ಓದಿ…ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...