Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

- Advertisement -
- Advertisement -

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು ಪತ್ರಿಕಾಗೋಷ್ಠಿ ನಡೆಸಿದರು.

ಕಳೆದ 35 ವರ್ಷಗಳಿಂದ ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ನಿರಂತರವಾಗಿ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದು, ನಮ್ಮ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು. ತೀರ್ಪು ಬಂದು ಎರಡು ವರ್ಷಗಳಾದರೂ ಸಮಗ್ರವಾಗಿ ಒಳಮಿಸಲಾತಿ ಜಾರಿಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಲದೇ 56,432 ಹುದ್ದೆಗಳನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ 12 ಮಾರ್ಚ್‌ ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಹೋರಾಟದ ನಿಯೋಗವನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಹುದ್ದೆಯನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡುವುದಿಲ್ಲ ಎಂದು ಆಶ್ವಾಸನೆ ನೀಡಿದ್ದರು. 13ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯರನ್ನು ಭೇಟಿ ಮಾಡಿದ ಹೋರಾಟಗಾರರ ನಿಯೋಗ DPAR ಸುತ್ತೋಲೆ, ರಾಜ್ಯಪಾಲರಿಂದ ಸಹಿಯಾದ ಕಾಯ್ದೆಯ ರಾಜ್ಯಪತ್ರ ಹೊರಡಿಸಲು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕುರಿತು ಚರ್ಚಿಸಿದಾಗ, ಕೂಡಲೇ ರಾಜ್ಯಪತ್ರವನ್ನು ಹೊರಡಿಸುವುದಾಗಿ ನಿಯೋಗಕ್ಕೆ ತಿಳಿಸಿದರು ಎಂದು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ವಿವರಿಸಿದರು.

ಮಾರ್ಚ್‌ 27ರಂದು ನಡೆಯುವ ವಿಶೇಷ ಸಚಿವ ಸಂಪುಟವು ಒಳಮೀಸಲಾತಿ ಪರವಾದ ತೀರ್ಮಾನವನ್ನು ತೆಗೆದುಕೊಳ್ಳಲು ಎಲ್ಲಾ ಸಮುದಾಯಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಒಳಮೀಸಲಾತಿ ಅಲ್ಲದೆಯೇ ಅಸ್ಪೃಷ್ಯ ಸಮುದಾಯಗಳ ಜ್ವಲಂತ ಸಮಸ್ಯೆಗಳಾದ ಭೂಮಿ ಹಕ್ಕು, ದೌರ್ಜನ್ಯ ತಡೆ, SCSP-TSP ಅನುದಾನದಲ್ಲಿ ಅನ್ಯಾಯದ ವಿರುದ್ದ ಸಂಘಟಿರಾಗಿ ಹೋರಾಟ ನಡೆಸುವ ಅನಿವಾರ್ಯ ಇದೆ. ಹಾಗಾಗಿ ರೋಸ್ಟರ್‌ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಕೂತು ಬಗೆಹರಿಸಿಕೊಂಡು ಒಳಮೀಸಲಾತಿಯನ್ನು ಜಾರಿಮಾಡಿಕೊಳ್ಳೋಣ ಎಂದು ಮನವಿ ಮಾಡಿದರು.

ಒಳಮೀಸಲಾತಿ ಹೋರಾಟ ಸಾಮಾಜಿಕ ನ್ಯಾಯದ ಹೋರಾಟವಾದ್ದರಿಂದ ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟ ಎಂದು ಯಾರೂ ಭಾವಿಸಬಾರದು ಎಂದೂ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ರವರು “27ರಂದು ಒಳಮೀಸಲಾತಿಯನ್ನು ಎಲ್ಲಾ ಹಂತಗಳಲ್ಲೂ ಅನ್ವಯಿಸಿ ಆದೇಶ ಹೊರಡಿಸದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರವಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಲ್ಲಾ ರೀತಿಯಲ್ಲೂ ಎದುರುಗೊಳ್ಳುತ್ತೇವೆ. ಸಮುದಾಯದ ಭಾವನೆಗೆ ಬೆಲೆ ಕೊಟ್ಟು ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ” ಎಂದು ಆಗ್ರಹಿಸಿದರು.

ಮತ್ತೊಬ್ಬ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಬಿ. ನರಸಪ್ಪ ಮಾತನಾಡಿ, “ಒಳಮೀಸಲಾತಿ ಹೋರಾಟವನ್ನು ಸರ್ಕಾರ ಕಡೆಗಣಿಸಿದ ಪಕ್ಷದಲ್ಲಿ ಸರ್ಕಾರ ತನ್ನ ಅಂತ್ಯವನ್ನು ಕಾಣಲಿದೆ” ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾರಸಂದ್ರ ಮುನಿಯಪ್ಪ, ಅಂಬಣ್ಣ ಅರೋಲಿಕರ್‌, ಬಿ ನರಸಪ್ಪ, ಎಂ ಗುರುಮೂರ್ತಿ, ಫರ್ನಾಂಡಿಸ್‌ ಇಪ್ಪಳಗಾಂವ್‌, ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...