Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

- Advertisement -
- Advertisement -

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು ಪತ್ರಿಕಾಗೋಷ್ಠಿ ನಡೆಸಿದರು.

ಕಳೆದ 35 ವರ್ಷಗಳಿಂದ ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ನಿರಂತರವಾಗಿ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದು, ನಮ್ಮ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು. ತೀರ್ಪು ಬಂದು ಎರಡು ವರ್ಷಗಳಾದರೂ ಸಮಗ್ರವಾಗಿ ಒಳಮಿಸಲಾತಿ ಜಾರಿಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಲದೇ 56,432 ಹುದ್ದೆಗಳನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ 12 ಮಾರ್ಚ್‌ ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಹೋರಾಟದ ನಿಯೋಗವನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಹುದ್ದೆಯನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡುವುದಿಲ್ಲ ಎಂದು ಆಶ್ವಾಸನೆ ನೀಡಿದ್ದರು. 13ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯರನ್ನು ಭೇಟಿ ಮಾಡಿದ ಹೋರಾಟಗಾರರ ನಿಯೋಗ DPAR ಸುತ್ತೋಲೆ, ರಾಜ್ಯಪಾಲರಿಂದ ಸಹಿಯಾದ ಕಾಯ್ದೆಯ ರಾಜ್ಯಪತ್ರ ಹೊರಡಿಸಲು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕುರಿತು ಚರ್ಚಿಸಿದಾಗ, ಕೂಡಲೇ ರಾಜ್ಯಪತ್ರವನ್ನು ಹೊರಡಿಸುವುದಾಗಿ ನಿಯೋಗಕ್ಕೆ ತಿಳಿಸಿದರು ಎಂದು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ವಿವರಿಸಿದರು.

ಮಾರ್ಚ್‌ 27ರಂದು ನಡೆಯುವ ವಿಶೇಷ ಸಚಿವ ಸಂಪುಟವು ಒಳಮೀಸಲಾತಿ ಪರವಾದ ತೀರ್ಮಾನವನ್ನು ತೆಗೆದುಕೊಳ್ಳಲು ಎಲ್ಲಾ ಸಮುದಾಯಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಒಳಮೀಸಲಾತಿ ಅಲ್ಲದೆಯೇ ಅಸ್ಪೃಷ್ಯ ಸಮುದಾಯಗಳ ಜ್ವಲಂತ ಸಮಸ್ಯೆಗಳಾದ ಭೂಮಿ ಹಕ್ಕು, ದೌರ್ಜನ್ಯ ತಡೆ, SCSP-TSP ಅನುದಾನದಲ್ಲಿ ಅನ್ಯಾಯದ ವಿರುದ್ದ ಸಂಘಟಿರಾಗಿ ಹೋರಾಟ ನಡೆಸುವ ಅನಿವಾರ್ಯ ಇದೆ. ಹಾಗಾಗಿ ರೋಸ್ಟರ್‌ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಕೂತು ಬಗೆಹರಿಸಿಕೊಂಡು ಒಳಮೀಸಲಾತಿಯನ್ನು ಜಾರಿಮಾಡಿಕೊಳ್ಳೋಣ ಎಂದು ಮನವಿ ಮಾಡಿದರು.

ಒಳಮೀಸಲಾತಿ ಹೋರಾಟ ಸಾಮಾಜಿಕ ನ್ಯಾಯದ ಹೋರಾಟವಾದ್ದರಿಂದ ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟ ಎಂದು ಯಾರೂ ಭಾವಿಸಬಾರದು ಎಂದೂ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ರವರು “27ರಂದು ಒಳಮೀಸಲಾತಿಯನ್ನು ಎಲ್ಲಾ ಹಂತಗಳಲ್ಲೂ ಅನ್ವಯಿಸಿ ಆದೇಶ ಹೊರಡಿಸದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರವಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಲ್ಲಾ ರೀತಿಯಲ್ಲೂ ಎದುರುಗೊಳ್ಳುತ್ತೇವೆ. ಸಮುದಾಯದ ಭಾವನೆಗೆ ಬೆಲೆ ಕೊಟ್ಟು ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ” ಎಂದು ಆಗ್ರಹಿಸಿದರು.

ಮತ್ತೊಬ್ಬ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಬಿ. ನರಸಪ್ಪ ಮಾತನಾಡಿ, “ಒಳಮೀಸಲಾತಿ ಹೋರಾಟವನ್ನು ಸರ್ಕಾರ ಕಡೆಗಣಿಸಿದ ಪಕ್ಷದಲ್ಲಿ ಸರ್ಕಾರ ತನ್ನ ಅಂತ್ಯವನ್ನು ಕಾಣಲಿದೆ” ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾರಸಂದ್ರ ಮುನಿಯಪ್ಪ, ಅಂಬಣ್ಣ ಅರೋಲಿಕರ್‌, ಬಿ ನರಸಪ್ಪ, ಎಂ ಗುರುಮೂರ್ತಿ, ಫರ್ನಾಂಡಿಸ್‌ ಇಪ್ಪಳಗಾಂವ್‌, ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...