Homeಕರ್ನಾಟಕ'ಎಕೆ, ಎಡಿ, ಎಎ'ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ಜಸ್ಟೀಸ್ ಎಚ್‌.ಎನ್. ನಾಗಮೋಹನ್‌ ದಾಸ್ ಸಮಿತಿಗೆ ಸಮೀಕ್ಷೆ ಸಮಯದಲ್ಲಿ ತಮ್ಮ ಮೂಲ ಜಾತಿಗಳನ್ನು ಹೇಳಿಕೊಳ್ಳದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಗಳ (ಎಸ್‌ಸಿ) ಪಟ್ಟಿಯಿಂದ ಕೈಬಿಡುವಂತೆ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ ಆಗ್ರಹಿಸಿದೆ.

ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಒಳಮೀಸಲಾತಿ ಹೋರಾಟ ಸಮಿತಿ ನಿಯೋಗ, “ಎಕೆ, ಎಡಿ, ಎಎ ಗುಂಪಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ, ಎಡಿ, ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.

ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯನ್ನು ದಿನಾಂಕ: 25-08-2025ರಂದು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಬಗ್ಗೆ ನ್ಯಾ. ಎಚ್.ಎನ್. ನಾಗಮೋಹನ್‌ ದಾಸ್ ಆಯೋಗ ನೀಡಿರುವ ವರದಿಯನ್ನು ಕೂಲಂಕುಶವಾಗಿ ಚರ್ಚಿಸಿ ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಕೊಟ್ಟಿರುತ್ತದೆ. ಆದರೆ, ಸರ್ಕಾರದ ಆದೇಶದ ಪ್ಯಾರಾ-2 ಗೊಂದಲದಿಂದ ಕೂಡಿದ್ದು ಅದನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

“ಸರ್ಕಾರದ ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿದ್ದು, ಎಕೆ. ಎಡಿ, ಎಎ ಯ ವರಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ ಎಡಿ ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“2ನೇ ಶಿಫಾರಸ್ಸು ರಾಜ್ಯದಲ್ಲಿ ಚರ್ಚೆಗೆ ತುಂಬಾ ಗ್ರಾಸವಾಗಿದೆ. ಏಕೆಂದರೆ, 2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡದ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು, ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಒಳಮೀಸಲಾತಿ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿದವರಾಗಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾದ ಒಳಮೀಸಲಾತಿ ಹೋರಾಟ ನಡೆಯಿತು. ಒಂದು ವೇಳೆ ದಿನಾಂಕ: 25-08-2025ರ ಆದೇಶ ಅಂತಿಮಗೊಂಡರೆ 30 ವರ್ಷಗಳಿಂದ ಹೋರಾಟ ನಡೆಸಿ ಪಡೆದ ಒಳಮೀಸಲಾತಿ ಸೌಲಭ್ಯವು ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುವ ಎಲ್ಲ ಸಂಭವಗಳಿವೆ. ಆದ್ದರಿಂದ ಸರ್ಕಾರಿ ಆದೇಶದ ಪ್ಯಾರಾ-2ನ್ನು ತಿದ್ದುಪಡಿ ಮಾಡಬೇಕಾಗಿದೆ” ಎಂದು ಮನವಿ ಮಾಡಿದ್ದಾರೆ.

“ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಸರ್ಕಾರ ಪ್ರವರ್ಗವಾರು ಪ್ರವರ್ಗ-ಎ, ಪ್ರವರ್ಗ-ಬಿ ಅನುಬಂಧಗಳಲ್ಲಿ ಸೂಚಿಸಿರುವಂತೆ ತಮಗೆ ಸಂಬಂಧಿಸಿದ ಮೂಲಜಾತಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯಿಂದ ಕೂಡಲೇ ಪಡೆದುಕೊಂಡು ತಮ್ಮಜಾತಿ ಸಂಬಂಧಿಸಿದ ಪ್ರವರ್ಗದಿಂದ ಮೀಸಲಾತಿ ಸೌಲಭ್ಯವನ್ನು ಪಡೆಯಲು ತಿಳಿಸಬೇಕು” ಎಂದು ಹೋರಾಟಗಾರರು ಮನವಿಯಲ್ಲು ಉಲ್ಲೇಖಿಸಿದ್ದಾರೆ.

ಜೊತೆಗೆ, “ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು” ಎಂದು ನಿಯೋಗ ಮನವಿ ಮಾಡಿದೆ.

“ದಿನಾಂಕ:03-09-2025ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಆದೇಶವು ಕೇವಲ ನೇರನೇಮಕಾತಿಗೆ ಮಾತ್ರ ಅನ್ವಯಿಸುವಂತಹ ತಪ್ಪು ಆದೇಶವಾಗಿದೆ. ಸಂವಿಧಾನದ ಪರಿಚ್ಛೇದ 16ರಂತೆ ಹುದ್ದೆಗಳ ನೇಮಕಾತಿ ಎಂದರೆ,  ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುತ್ತದೆ. ಆದ್ದರಿಂದ, ಸರ್ಕಾರಿ ಆದೇಶವು ಮತ್ತೊಮ್ಮೆ ತಿದ್ದುಪಡಿ ಮಾಡಿ ಒಳಮೀಸಲಾತಿಯನ್ನು ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸಿ ಆದೇಶ ಹೊರಡಿಸಬೇಕು” ಎಂದು ಹೇಳಿದ್ದಾರೆ.

“ನೇರ ನೇಮಕಾತಿ ಮತ್ತು ಬಡ್ತಿ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:04-09-2025ರಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮಣಿವಣ್ಣನ್‌ ಅವರು, ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಿದ ಪತ್ರದಲ್ಲಿ ಪರಿಶಿಷ್ಟ ಜಾತಿ ನೌಕರರಿಗೆ ರೋಸ್ಟರ್ ಬಿಂದುಗಳ ಬಗ್ಗೆ ಈಗ ಸರ್ಕಾರ ನಿಗಧಿಪಡಿಸಿದ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದಂತೆ ತಪ್ಪು ಮತ್ತು ಸರ್ಕಾರವನ್ನು ದಾರಿತಪ್ಪಿಸುವಂತಿದೆ” ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.

ಪ್ರಮುಖ ಹಕ್ಕೊತ್ತಾಯಗಳು:

• ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಯವರಿಗೆ ಮೂಲ ಜಾತಿ ಪ್ರಮಾಣಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು.

• ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು.

• ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಬದಲಾಯಿಸಬೇಕು.

• ತೆಲಂಗಾಣ ರಾಜ್ಯ ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ಒಳಮೀಸಲಾತಿ ಪ್ರತ್ಯೇಕ ಕಾಯ್ದೆಯನ್ನು ಕೂಡಲೇ ರಚಿಸಬೇಕು.

• ಶಾಶ್ವತ ಆಯೋಗವನ್ನು ಕೂಡಲೇ ರಚಿಸಿ ಆದೇಶ ಹೊರಡಿಸಬೇಕು. ಶಾಶ್ವತ ಆಯೋಗದಲ್ಲಿ ಪರಿಶಿಷ್ಟ ಜಾತಿಗಳ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಇರಬೇಕು.

ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಎಸ್.ಮಾರೆಪ್ಪ, ಮಾರಸಂದ್ರ ಮುನಿಯಪ್ಪ, ಬಸವರಾಜ್ ಕೌತಾಳ್‌, ಅಂಬಣ್ಣ ಅರೋಲಿಕರ್,  ಶಿವರಾಯ ಅಕ್ಕರಕಿ, ಎಂ. ಶಂಕ್ರಪ್ಪ, ಪಾವಗಡಶ್ರೀರಾಮ್, ಹೇಮರಾಜ್ಅ ಸ್ಕಿಹಾಳ, ಕರಿಯಪ್ಪ ಗುಡಿಮನೆ, ವೆಂಕಟೇಶ್ ದೀಪಾಂಜಲಿನಗರ, ವೈ. ಕೆ. ಬಾಲಕೃಷ್ಣ ಸೇರಿದಂತೆ ಹಲವರು ಇದ್ದರು.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...