Homeಕರ್ನಾಟಕ'ಎಕೆ, ಎಡಿ, ಎಎ'ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ಜಸ್ಟೀಸ್ ಎಚ್‌.ಎನ್. ನಾಗಮೋಹನ್‌ ದಾಸ್ ಸಮಿತಿಗೆ ಸಮೀಕ್ಷೆ ಸಮಯದಲ್ಲಿ ತಮ್ಮ ಮೂಲ ಜಾತಿಗಳನ್ನು ಹೇಳಿಕೊಳ್ಳದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಗಳ (ಎಸ್‌ಸಿ) ಪಟ್ಟಿಯಿಂದ ಕೈಬಿಡುವಂತೆ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ ಆಗ್ರಹಿಸಿದೆ.

ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಒಳಮೀಸಲಾತಿ ಹೋರಾಟ ಸಮಿತಿ ನಿಯೋಗ, “ಎಕೆ, ಎಡಿ, ಎಎ ಗುಂಪಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ, ಎಡಿ, ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.

ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯನ್ನು ದಿನಾಂಕ: 25-08-2025ರಂದು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಬಗ್ಗೆ ನ್ಯಾ. ಎಚ್.ಎನ್. ನಾಗಮೋಹನ್‌ ದಾಸ್ ಆಯೋಗ ನೀಡಿರುವ ವರದಿಯನ್ನು ಕೂಲಂಕುಶವಾಗಿ ಚರ್ಚಿಸಿ ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಕೊಟ್ಟಿರುತ್ತದೆ. ಆದರೆ, ಸರ್ಕಾರದ ಆದೇಶದ ಪ್ಯಾರಾ-2 ಗೊಂದಲದಿಂದ ಕೂಡಿದ್ದು ಅದನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

“ಸರ್ಕಾರದ ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿದ್ದು, ಎಕೆ. ಎಡಿ, ಎಎ ಯ ವರಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ ಎಡಿ ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“2ನೇ ಶಿಫಾರಸ್ಸು ರಾಜ್ಯದಲ್ಲಿ ಚರ್ಚೆಗೆ ತುಂಬಾ ಗ್ರಾಸವಾಗಿದೆ. ಏಕೆಂದರೆ, 2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡದ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು, ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಒಳಮೀಸಲಾತಿ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿದವರಾಗಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾದ ಒಳಮೀಸಲಾತಿ ಹೋರಾಟ ನಡೆಯಿತು. ಒಂದು ವೇಳೆ ದಿನಾಂಕ: 25-08-2025ರ ಆದೇಶ ಅಂತಿಮಗೊಂಡರೆ 30 ವರ್ಷಗಳಿಂದ ಹೋರಾಟ ನಡೆಸಿ ಪಡೆದ ಒಳಮೀಸಲಾತಿ ಸೌಲಭ್ಯವು ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುವ ಎಲ್ಲ ಸಂಭವಗಳಿವೆ. ಆದ್ದರಿಂದ ಸರ್ಕಾರಿ ಆದೇಶದ ಪ್ಯಾರಾ-2ನ್ನು ತಿದ್ದುಪಡಿ ಮಾಡಬೇಕಾಗಿದೆ” ಎಂದು ಮನವಿ ಮಾಡಿದ್ದಾರೆ.

“ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಸರ್ಕಾರ ಪ್ರವರ್ಗವಾರು ಪ್ರವರ್ಗ-ಎ, ಪ್ರವರ್ಗ-ಬಿ ಅನುಬಂಧಗಳಲ್ಲಿ ಸೂಚಿಸಿರುವಂತೆ ತಮಗೆ ಸಂಬಂಧಿಸಿದ ಮೂಲಜಾತಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯಿಂದ ಕೂಡಲೇ ಪಡೆದುಕೊಂಡು ತಮ್ಮಜಾತಿ ಸಂಬಂಧಿಸಿದ ಪ್ರವರ್ಗದಿಂದ ಮೀಸಲಾತಿ ಸೌಲಭ್ಯವನ್ನು ಪಡೆಯಲು ತಿಳಿಸಬೇಕು” ಎಂದು ಹೋರಾಟಗಾರರು ಮನವಿಯಲ್ಲು ಉಲ್ಲೇಖಿಸಿದ್ದಾರೆ.

ಜೊತೆಗೆ, “ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು” ಎಂದು ನಿಯೋಗ ಮನವಿ ಮಾಡಿದೆ.

“ದಿನಾಂಕ:03-09-2025ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಆದೇಶವು ಕೇವಲ ನೇರನೇಮಕಾತಿಗೆ ಮಾತ್ರ ಅನ್ವಯಿಸುವಂತಹ ತಪ್ಪು ಆದೇಶವಾಗಿದೆ. ಸಂವಿಧಾನದ ಪರಿಚ್ಛೇದ 16ರಂತೆ ಹುದ್ದೆಗಳ ನೇಮಕಾತಿ ಎಂದರೆ,  ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುತ್ತದೆ. ಆದ್ದರಿಂದ, ಸರ್ಕಾರಿ ಆದೇಶವು ಮತ್ತೊಮ್ಮೆ ತಿದ್ದುಪಡಿ ಮಾಡಿ ಒಳಮೀಸಲಾತಿಯನ್ನು ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸಿ ಆದೇಶ ಹೊರಡಿಸಬೇಕು” ಎಂದು ಹೇಳಿದ್ದಾರೆ.

“ನೇರ ನೇಮಕಾತಿ ಮತ್ತು ಬಡ್ತಿ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:04-09-2025ರಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮಣಿವಣ್ಣನ್‌ ಅವರು, ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಿದ ಪತ್ರದಲ್ಲಿ ಪರಿಶಿಷ್ಟ ಜಾತಿ ನೌಕರರಿಗೆ ರೋಸ್ಟರ್ ಬಿಂದುಗಳ ಬಗ್ಗೆ ಈಗ ಸರ್ಕಾರ ನಿಗಧಿಪಡಿಸಿದ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದಂತೆ ತಪ್ಪು ಮತ್ತು ಸರ್ಕಾರವನ್ನು ದಾರಿತಪ್ಪಿಸುವಂತಿದೆ” ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.

ಪ್ರಮುಖ ಹಕ್ಕೊತ್ತಾಯಗಳು:

• ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಯವರಿಗೆ ಮೂಲ ಜಾತಿ ಪ್ರಮಾಣಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು.

• ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು.

• ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಬದಲಾಯಿಸಬೇಕು.

• ತೆಲಂಗಾಣ ರಾಜ್ಯ ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ಒಳಮೀಸಲಾತಿ ಪ್ರತ್ಯೇಕ ಕಾಯ್ದೆಯನ್ನು ಕೂಡಲೇ ರಚಿಸಬೇಕು.

• ಶಾಶ್ವತ ಆಯೋಗವನ್ನು ಕೂಡಲೇ ರಚಿಸಿ ಆದೇಶ ಹೊರಡಿಸಬೇಕು. ಶಾಶ್ವತ ಆಯೋಗದಲ್ಲಿ ಪರಿಶಿಷ್ಟ ಜಾತಿಗಳ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಇರಬೇಕು.

ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಎಸ್.ಮಾರೆಪ್ಪ, ಮಾರಸಂದ್ರ ಮುನಿಯಪ್ಪ, ಬಸವರಾಜ್ ಕೌತಾಳ್‌, ಅಂಬಣ್ಣ ಅರೋಲಿಕರ್,  ಶಿವರಾಯ ಅಕ್ಕರಕಿ, ಎಂ. ಶಂಕ್ರಪ್ಪ, ಪಾವಗಡಶ್ರೀರಾಮ್, ಹೇಮರಾಜ್ಅ ಸ್ಕಿಹಾಳ, ಕರಿಯಪ್ಪ ಗುಡಿಮನೆ, ವೆಂಕಟೇಶ್ ದೀಪಾಂಜಲಿನಗರ, ವೈ. ಕೆ. ಬಾಲಕೃಷ್ಣ ಸೇರಿದಂತೆ ಹಲವರು ಇದ್ದರು.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...