Homeಕರ್ನಾಟಕ'ಎಕೆ, ಎಡಿ, ಎಎ'ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ಜಸ್ಟೀಸ್ ಎಚ್‌.ಎನ್. ನಾಗಮೋಹನ್‌ ದಾಸ್ ಸಮಿತಿಗೆ ಸಮೀಕ್ಷೆ ಸಮಯದಲ್ಲಿ ತಮ್ಮ ಮೂಲ ಜಾತಿಗಳನ್ನು ಹೇಳಿಕೊಳ್ಳದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಗಳ (ಎಸ್‌ಸಿ) ಪಟ್ಟಿಯಿಂದ ಕೈಬಿಡುವಂತೆ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ ಆಗ್ರಹಿಸಿದೆ.

ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಒಳಮೀಸಲಾತಿ ಹೋರಾಟ ಸಮಿತಿ ನಿಯೋಗ, “ಎಕೆ, ಎಡಿ, ಎಎ ಗುಂಪಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ, ಎಡಿ, ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.

ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯನ್ನು ದಿನಾಂಕ: 25-08-2025ರಂದು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಬಗ್ಗೆ ನ್ಯಾ. ಎಚ್.ಎನ್. ನಾಗಮೋಹನ್‌ ದಾಸ್ ಆಯೋಗ ನೀಡಿರುವ ವರದಿಯನ್ನು ಕೂಲಂಕುಶವಾಗಿ ಚರ್ಚಿಸಿ ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಕೊಟ್ಟಿರುತ್ತದೆ. ಆದರೆ, ಸರ್ಕಾರದ ಆದೇಶದ ಪ್ಯಾರಾ-2 ಗೊಂದಲದಿಂದ ಕೂಡಿದ್ದು ಅದನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

“ಸರ್ಕಾರದ ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿದ್ದು, ಎಕೆ. ಎಡಿ, ಎಎ ಯ ವರಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ ಎಡಿ ಎಎಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು” ಎಂದು ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“2ನೇ ಶಿಫಾರಸ್ಸು ರಾಜ್ಯದಲ್ಲಿ ಚರ್ಚೆಗೆ ತುಂಬಾ ಗ್ರಾಸವಾಗಿದೆ. ಏಕೆಂದರೆ, 2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡದ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು, ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಒಳಮೀಸಲಾತಿ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿದವರಾಗಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾದ ಒಳಮೀಸಲಾತಿ ಹೋರಾಟ ನಡೆಯಿತು. ಒಂದು ವೇಳೆ ದಿನಾಂಕ: 25-08-2025ರ ಆದೇಶ ಅಂತಿಮಗೊಂಡರೆ 30 ವರ್ಷಗಳಿಂದ ಹೋರಾಟ ನಡೆಸಿ ಪಡೆದ ಒಳಮೀಸಲಾತಿ ಸೌಲಭ್ಯವು ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುವ ಎಲ್ಲ ಸಂಭವಗಳಿವೆ. ಆದ್ದರಿಂದ ಸರ್ಕಾರಿ ಆದೇಶದ ಪ್ಯಾರಾ-2ನ್ನು ತಿದ್ದುಪಡಿ ಮಾಡಬೇಕಾಗಿದೆ” ಎಂದು ಮನವಿ ಮಾಡಿದ್ದಾರೆ.

“ಪ್ಯಾರ-2 ರ ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಈ ಮೂರು ಸಮುದಾಯಗಳು ತಮ್ಮ ಮೂಲಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಸರ್ಕಾರ ಪ್ರವರ್ಗವಾರು ಪ್ರವರ್ಗ-ಎ, ಪ್ರವರ್ಗ-ಬಿ ಅನುಬಂಧಗಳಲ್ಲಿ ಸೂಚಿಸಿರುವಂತೆ ತಮಗೆ ಸಂಬಂಧಿಸಿದ ಮೂಲಜಾತಿ ಪ್ರಮಾಣಪತ್ರವನ್ನು ಕಂದಾಯ ಇಲಾಖೆಯಿಂದ ಕೂಡಲೇ ಪಡೆದುಕೊಂಡು ತಮ್ಮಜಾತಿ ಸಂಬಂಧಿಸಿದ ಪ್ರವರ್ಗದಿಂದ ಮೀಸಲಾತಿ ಸೌಲಭ್ಯವನ್ನು ಪಡೆಯಲು ತಿಳಿಸಬೇಕು” ಎಂದು ಹೋರಾಟಗಾರರು ಮನವಿಯಲ್ಲು ಉಲ್ಲೇಖಿಸಿದ್ದಾರೆ.

ಜೊತೆಗೆ, “ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು” ಎಂದು ನಿಯೋಗ ಮನವಿ ಮಾಡಿದೆ.

“ದಿನಾಂಕ:03-09-2025ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಆದೇಶವು ಕೇವಲ ನೇರನೇಮಕಾತಿಗೆ ಮಾತ್ರ ಅನ್ವಯಿಸುವಂತಹ ತಪ್ಪು ಆದೇಶವಾಗಿದೆ. ಸಂವಿಧಾನದ ಪರಿಚ್ಛೇದ 16ರಂತೆ ಹುದ್ದೆಗಳ ನೇಮಕಾತಿ ಎಂದರೆ,  ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುತ್ತದೆ. ಆದ್ದರಿಂದ, ಸರ್ಕಾರಿ ಆದೇಶವು ಮತ್ತೊಮ್ಮೆ ತಿದ್ದುಪಡಿ ಮಾಡಿ ಒಳಮೀಸಲಾತಿಯನ್ನು ನೇರನೇಮಕಾತಿ, ಬಡ್ತಿನೇಮಕಾತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸಿ ಆದೇಶ ಹೊರಡಿಸಬೇಕು” ಎಂದು ಹೇಳಿದ್ದಾರೆ.

“ನೇರ ನೇಮಕಾತಿ ಮತ್ತು ಬಡ್ತಿ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:04-09-2025ರಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮಣಿವಣ್ಣನ್‌ ಅವರು, ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಿದ ಪತ್ರದಲ್ಲಿ ಪರಿಶಿಷ್ಟ ಜಾತಿ ನೌಕರರಿಗೆ ರೋಸ್ಟರ್ ಬಿಂದುಗಳ ಬಗ್ಗೆ ಈಗ ಸರ್ಕಾರ ನಿಗಧಿಪಡಿಸಿದ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದಂತೆ ತಪ್ಪು ಮತ್ತು ಸರ್ಕಾರವನ್ನು ದಾರಿತಪ್ಪಿಸುವಂತಿದೆ” ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.

ಪ್ರಮುಖ ಹಕ್ಕೊತ್ತಾಯಗಳು:

• ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಯವರಿಗೆ ಮೂಲ ಜಾತಿ ಪ್ರಮಾಣಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಆದಿಕರ್ನಾಟಕ, ಆದಿಆಂಧ್ರ, ಆದಿದ್ರಾವಿಡ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸ್ಸು ಮಾಡಬೇಕು.

• ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ನೇಮಕಾತಿ ಅಲ್ಲದೇ ಬಡ್ತಿ ನೇಮಕಾತಿ, ಬ್ಯಾಕ್ಲಾಗ್ ಅನ್ವಯಿಸಿ ರೋಸ್ಟರ್ ಬಿಂದು ಪ್ರಕಟಿಸಬೇಕು.

• ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಬದಲಾಯಿಸಬೇಕು.

• ತೆಲಂಗಾಣ ರಾಜ್ಯ ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ಒಳಮೀಸಲಾತಿ ಪ್ರತ್ಯೇಕ ಕಾಯ್ದೆಯನ್ನು ಕೂಡಲೇ ರಚಿಸಬೇಕು.

• ಶಾಶ್ವತ ಆಯೋಗವನ್ನು ಕೂಡಲೇ ರಚಿಸಿ ಆದೇಶ ಹೊರಡಿಸಬೇಕು. ಶಾಶ್ವತ ಆಯೋಗದಲ್ಲಿ ಪರಿಶಿಷ್ಟ ಜಾತಿಗಳ ಎಲ್ಲ ಸಮುದಾಯಗಳ ಪ್ರತಿನಿಧಿಗಳು ಇರಬೇಕು.

ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಎಸ್.ಮಾರೆಪ್ಪ, ಮಾರಸಂದ್ರ ಮುನಿಯಪ್ಪ, ಬಸವರಾಜ್ ಕೌತಾಳ್‌, ಅಂಬಣ್ಣ ಅರೋಲಿಕರ್,  ಶಿವರಾಯ ಅಕ್ಕರಕಿ, ಎಂ. ಶಂಕ್ರಪ್ಪ, ಪಾವಗಡಶ್ರೀರಾಮ್, ಹೇಮರಾಜ್ಅ ಸ್ಕಿಹಾಳ, ಕರಿಯಪ್ಪ ಗುಡಿಮನೆ, ವೆಂಕಟೇಶ್ ದೀಪಾಂಜಲಿನಗರ, ವೈ. ಕೆ. ಬಾಲಕೃಷ್ಣ ಸೇರಿದಂತೆ ಹಲವರು ಇದ್ದರು.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...