Homeಕರ್ನಾಟಕಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ:...

ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವು ಭಾವಿಸುತ್ತೇವೆ. ಆದ್ದರಿಂದ, ಅವರ ಸಮುದಾಯ ಪರವಾದ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಹೇಳಿದರು.

ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಇಂದಿನಿಂದ ಆರಂಭವಾಗಿರುವ ಅಧೀವೇಶನದಲ್ಲಿ ಒಳಮಿಸಲಾತಿ ವಿಚಾರ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ನಾವು ಈ ಹೋರಾಟ ಆರಂಭಿಸಿದ್ದೇವೆ; ಇದು ಆರಂಭ ಮಾತ್ರ. ಇಲ್ಲಿ ಹಲವು ತಜ್ಞರು ಮತ್ತು ಹೋರಾಟಗಾರರು ಬಂದಿದ್ದಾರೆ. ಇದು ಯಾವುದೋ ಒಂದು ಸಂಘಟನೆಯ ಹೋರಾಟವಲ್ಲ, ಇದು ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟ. ಒಳ ಮೀಸಲಾತಿ ಕುರಿತು ನಾವು ಇಲ್ಲಿ ಮುಕ್ತವಾಗಿ ಚರ್ಚೆ ಮಾಡಬೇಕಿದೆ” ಎಂದರು.

“ಮೊದಲು ಜಸ್ಟೀಸ್ ನಾಗಮೋಹನ್‌ ದಾಸ್‌ ವರದಿ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು, ಸಣ್ಣಪುಟ್ಟ ಬದಲಾವಣೆಗಳಿದ್ದರೆ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಸಂಪುಟ ಉಪ ಸಮಿತಿ ರಚನೆ ಮಾಡುವ ಮೂಲಕ ಇದನ್ನು ಮುಂದೂಡಬಾರದು” ಎಂದರು.

“ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವೆಲ್ಲರೂ ಭಾವಿಸುತ್ತೇವೆ, ಅವರ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಮಾದಿಗ ಸಮುದಾಯ 35 ವರ್ಷಗಳ ಕಾಲ ಮಾಡಿರುವ ಹೋರಾಟ ಯಾವುದೋ ಒಂದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ಪಕ್ಷದ ಪರವಾಗಿ ನಿಂತಿರಬಹುದು. ಆದ್ದರಿಂದ ಕಾಂಗ್ರೆಸ್ ಪಕ್ಷ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಕೂಡಲೇ ಅಂಗೀಕರಿಸಬೇಕು” ಎಂದು ಆಗ್ರಹಿಸಿದರು.

“ಜ್ಞಾನ ಪ್ರಕಾಶ ಸ್ವಾಮೀಜಿ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಸುಟ್ಟಿದ್ದು ಸರಿಯಲ್ಲ. ಆ ಮೂಲಕ ನೀವು ಒಂದೂವರೆ ಕೋಟಿ ಜನಸಂಖ್ಯೆಯ ಬದುಕನ್ನು ಸುಡಲು ಹೊರಟಿದ್ದೀರಿ. ಜ್ಞಾನಪ್ರಕಾಶ ಸ್ವಾಮೀಜಿ ಮಾಡಿದ್ದು ಸರಿಯಲ್ಲ; ಒಳ ಮೀಸಲಾತಿಯ ಹಿಂದಿನ ಹೋರಾಟದಲ್ಲಿ ಅವರು ನಮ್ಮೊಂದಿಗೆ ಇದ್ದರು. ಈ ಆದಿ ಕರ್ನಾಟಕ-ಆದಿ ದ್ರಾವಿಡ ವಿವಾದವನ್ನು ನಾವು ಮಾತನಾಡುವುದು ಸರಿಯಲ್ಲ. ಯಾವ ಜಾತಿ ಯಾವ ಗುಂಪಿನಲ್ಲಿ ಇರಬೇಕು ಎಂಬುದನ್ನು ಅದೇ ಸಮುದಾಯ ನಿರ್ಧರಿಸಬೇಕು. ಬೇಕಿದ್ದರೆ ನೀವು ಸರ್ಕಾರದೊಂದಿಗೆ ಚರ್ಚೆ ಮಾಡಿ, ಈ ಬಿಡಾರಕ್ಕೆ ಬಂದು ನೀವು ನಮ್ಮೊಂದಿಗೆ ಮುಕ್ತವಾಗಿ ಚರ್ಚೆ ಮಾಡಿ. ನಾವೇ ಕೂತು ಮಾತನಾಡಿ ಸಮಸ್ಯೆ ಬಗೆಹರಿಸಕೊಳ್ಳಬೇಕು” ಎಂದರು.

ಹಕ್ಕೊತ್ತಾಯಗಳು:

• ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯನ್ನು ಅಧಿವೇಶನದಲ್ಲಿ ಅಂಗೀಕರಿಸಿ, ಒಳಮೀಸಲಾತಿ ಜಾರಿಗೊಳಿಸಬೇಕು.
• ಮತ್ತೊಂದು ಉಪ ಸಮಿತಿ ರಚಿಸದೇ, ಸಚಿವ ಸಂಪುಟದಲ್ಲಿ ಜಾರಿಗೆ ಒಮ್ಮತದ ನಿರ್ಧಾರ ಕೈಗೊಳ್ಳಬೇಕು.
• ಮುಖ್ಯಮಂತ್ರಿಗಳು ತಾವೇ ನೀಡಿದ್ದ ಒಳಮೀಸಲಾತಿ ಗ್ಯಾರಂಟಿಯನ್ನು ತಮ್ಮ ಪರಮಾಧಿಕಾರ ಬಳಸಿ ಜಾರಿಮಾಡಬೇಕು.
• ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು.

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...