Homeಕರ್ನಾಟಕಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ:...

ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವು ಭಾವಿಸುತ್ತೇವೆ. ಆದ್ದರಿಂದ, ಅವರ ಸಮುದಾಯ ಪರವಾದ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಹೇಳಿದರು.

ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಇಂದಿನಿಂದ ಆರಂಭವಾಗಿರುವ ಅಧೀವೇಶನದಲ್ಲಿ ಒಳಮಿಸಲಾತಿ ವಿಚಾರ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ನಾವು ಈ ಹೋರಾಟ ಆರಂಭಿಸಿದ್ದೇವೆ; ಇದು ಆರಂಭ ಮಾತ್ರ. ಇಲ್ಲಿ ಹಲವು ತಜ್ಞರು ಮತ್ತು ಹೋರಾಟಗಾರರು ಬಂದಿದ್ದಾರೆ. ಇದು ಯಾವುದೋ ಒಂದು ಸಂಘಟನೆಯ ಹೋರಾಟವಲ್ಲ, ಇದು ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟ. ಒಳ ಮೀಸಲಾತಿ ಕುರಿತು ನಾವು ಇಲ್ಲಿ ಮುಕ್ತವಾಗಿ ಚರ್ಚೆ ಮಾಡಬೇಕಿದೆ” ಎಂದರು.

“ಮೊದಲು ಜಸ್ಟೀಸ್ ನಾಗಮೋಹನ್‌ ದಾಸ್‌ ವರದಿ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು, ಸಣ್ಣಪುಟ್ಟ ಬದಲಾವಣೆಗಳಿದ್ದರೆ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಸಂಪುಟ ಉಪ ಸಮಿತಿ ರಚನೆ ಮಾಡುವ ಮೂಲಕ ಇದನ್ನು ಮುಂದೂಡಬಾರದು” ಎಂದರು.

“ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವೆಲ್ಲರೂ ಭಾವಿಸುತ್ತೇವೆ, ಅವರ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಮಾದಿಗ ಸಮುದಾಯ 35 ವರ್ಷಗಳ ಕಾಲ ಮಾಡಿರುವ ಹೋರಾಟ ಯಾವುದೋ ಒಂದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ಪಕ್ಷದ ಪರವಾಗಿ ನಿಂತಿರಬಹುದು. ಆದ್ದರಿಂದ ಕಾಂಗ್ರೆಸ್ ಪಕ್ಷ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಕೂಡಲೇ ಅಂಗೀಕರಿಸಬೇಕು” ಎಂದು ಆಗ್ರಹಿಸಿದರು.

“ಜ್ಞಾನ ಪ್ರಕಾಶ ಸ್ವಾಮೀಜಿ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಸುಟ್ಟಿದ್ದು ಸರಿಯಲ್ಲ. ಆ ಮೂಲಕ ನೀವು ಒಂದೂವರೆ ಕೋಟಿ ಜನಸಂಖ್ಯೆಯ ಬದುಕನ್ನು ಸುಡಲು ಹೊರಟಿದ್ದೀರಿ. ಜ್ಞಾನಪ್ರಕಾಶ ಸ್ವಾಮೀಜಿ ಮಾಡಿದ್ದು ಸರಿಯಲ್ಲ; ಒಳ ಮೀಸಲಾತಿಯ ಹಿಂದಿನ ಹೋರಾಟದಲ್ಲಿ ಅವರು ನಮ್ಮೊಂದಿಗೆ ಇದ್ದರು. ಈ ಆದಿ ಕರ್ನಾಟಕ-ಆದಿ ದ್ರಾವಿಡ ವಿವಾದವನ್ನು ನಾವು ಮಾತನಾಡುವುದು ಸರಿಯಲ್ಲ. ಯಾವ ಜಾತಿ ಯಾವ ಗುಂಪಿನಲ್ಲಿ ಇರಬೇಕು ಎಂಬುದನ್ನು ಅದೇ ಸಮುದಾಯ ನಿರ್ಧರಿಸಬೇಕು. ಬೇಕಿದ್ದರೆ ನೀವು ಸರ್ಕಾರದೊಂದಿಗೆ ಚರ್ಚೆ ಮಾಡಿ, ಈ ಬಿಡಾರಕ್ಕೆ ಬಂದು ನೀವು ನಮ್ಮೊಂದಿಗೆ ಮುಕ್ತವಾಗಿ ಚರ್ಚೆ ಮಾಡಿ. ನಾವೇ ಕೂತು ಮಾತನಾಡಿ ಸಮಸ್ಯೆ ಬಗೆಹರಿಸಕೊಳ್ಳಬೇಕು” ಎಂದರು.

ಹಕ್ಕೊತ್ತಾಯಗಳು:

• ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯನ್ನು ಅಧಿವೇಶನದಲ್ಲಿ ಅಂಗೀಕರಿಸಿ, ಒಳಮೀಸಲಾತಿ ಜಾರಿಗೊಳಿಸಬೇಕು.
• ಮತ್ತೊಂದು ಉಪ ಸಮಿತಿ ರಚಿಸದೇ, ಸಚಿವ ಸಂಪುಟದಲ್ಲಿ ಜಾರಿಗೆ ಒಮ್ಮತದ ನಿರ್ಧಾರ ಕೈಗೊಳ್ಳಬೇಕು.
• ಮುಖ್ಯಮಂತ್ರಿಗಳು ತಾವೇ ನೀಡಿದ್ದ ಒಳಮೀಸಲಾತಿ ಗ್ಯಾರಂಟಿಯನ್ನು ತಮ್ಮ ಪರಮಾಧಿಕಾರ ಬಳಸಿ ಜಾರಿಮಾಡಬೇಕು.
• ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು.

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...