Homeಮುಖಪುಟಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

ಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

- Advertisement -
- Advertisement -

ಹೊಸದಿಲ್ಲಿ: ಭಾರತದ ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಅವರನ್ನು ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್ (ಎಫ್‌ಐಜಿ) ಅಮಾನತು ಮಾಡಿದೆ. ಈ ವಿಷಯದ ಕುರಿತು ಭಾರತ ಜಿಮ್ನಾಸ್ಟಿಕ್ಸ್ ಫೆಡರೇಷನ್ ಅಚ್ಚರಿ ವ್ಯಕ್ತಪಡಿಸಿದ್ದು, ತಮಗೆ ಮಾಹಿತಿಯೇ ಇಲ್ಲ ಎಂದೂ ಹೇಳಿದೆ.

ಎಫ್‌ಐಜಿಯ ವೆಬ್‌ಸೈಟ್‌ನಲ್ಲಿ ದೀಪಾ ಅವರ ಹೆಸರು ಅಮಾನತು ಪಟ್ಟಿಯಲ್ಲಿದೆ. ಭಾರತದ ಜಿಮ್ನಾಸ್ಟ್‌ಗಳೆಲ್ಲರ ಹೆಸರುಗಳೆಲ್ಲವೂ ಈ ವೆಬ್‌ಸೈಟ್‌ನಲ್ಲಿವೆ. ಆದರೆ ದೀಪಾ ಅವರ ಹೆಸರಿನ ಮುಂದೆ ಅಮಾನತು ಎಂದು ಗುರುತಿಸಲಾಗಿದೆ.

ಉಳಿದವರೆಲ್ಲರನ್ನೂ ಸಕ್ರಿಯ ಎಂದು ಗುರುತಿಸಲಾಗಿದೆ. 2016ರ ರಿಯೊ ಒಲಿಂಪಿಕ್ಸ್‌ನ ವಾಲ್ಟ್‌ನಲ್ಲಿ ದೀಪಾ ನಾಲ್ಕನೇ ಸ್ಥಾನ ಗಳಿಸಿ ಗಮನ ಸೆಳೆದಿದ್ದರು. ಆದರೆ, ಗಾಯದ ಸಮಸ್ಯೆಯಿಂದಾಗಿ ಅವರು 2019 ರಿಂದ ಯಾವುದೇ ಸ್ಪರ್ಧೆಯಲ್ಲಿಯೂ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

ಎಫ್‌ಐಜಿಯಿಂದ ಈ ಕುರಿತು ನಮಗೆ ಯಾವುದೇ ಸಂದೇಶ ಬಂದಿಲ್ಲ. ಅವರನ್ನು ಅಮಾನತಿನಲ್ಲಿಡಲು ಕಾರಣವೇನು ಎಂಬುದೂ ಗೊತ್ತಿಲ್ಲ. ಇದು ಸತ್ಯವೋ ಅಥವಾ ಆಕಸ್ಮಿಕವಾಗಿ ನಡೆದಿರುವುದೋ ತಿಳಿದಿಲ್ಲ. ಎಫ್‌ಐಜಿಯೊಂದಿಗಿನ ಮಾತುಕತೆಯಿಂದಷ್ಟೇ ತಿಳಿಯಬೇಕಿದೆ’ ಎಂದು ಜಿಎಫ್‌ಐ ಅಧ್ಯಕ್ಷ ಸುಧೀರ್ ಮಿತ್ತಲ್ ತಿಳಿಸಿದ್ದಾರೆ.

ಅಗರ್ತಲಾದಲ್ಲಿರುವ ದೀಪಾ ಮತ್ತು ಅವರ ಕೋಚ್ ವಿಶ್ವೇಶ್ವರ್ ನಂದಿ ಅವರಿಂದ ಮಾಹಿತಿ ಪಡೆಯಲು ಮಾಡಿದ ಪ್ರಯತ್ನಗಳು ಫಲಿಸಲಿಲ್ಲ. ಅವರು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಶಿಸ್ತು ಅಥವಾ ನಿಯಮ ಉಲ್ಲಂಘನೆಗಾಗಿ ಎಫ್‌ಐಜಿ ಇಂತಹ ಕ್ರಮ ತೆಗೆದುಕೊಂಡಿರಬೇಕು. ಆದರೆ ಅಂತಹ ಯಾವುದೇ ಆರೋಪ ಅವರ ಮೇಲಿಲ್ಲ. ಆ ಕಾರಣಕ್ಕೂ ಅವರ ಮೇಲೆ ಅಮಾನತು ಹಾಕಿರುವ ಸಾಧ್ಯತೆಗಳಿಲ್ಲ‘ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಎಟಿ&ಎಸ್ ಕಾರ್ಮಿಕರ ಧರಣಿಗೆ 365 ದಿನಗಳು ತುಂಬಿದ ಸಂದರ್ಭದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....