Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...