Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...