Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...