Homeಮುಖಪುಟಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

‘ಕೊಳಕು ಭಾಷಣ’ ಆದರೆ ಅಚ್ಚರಿಯೇನಿಲ್ಲ: ಪ್ರಚಾರದ ವೇಳೆ ಮೋದಿಯಿಂದ ಮುಸ್ಲಿಂ ವಿರೋಧಿ ಮಾತುಗಳ ಆರೋಪ’ ಈ ರೀತಿ ಶೀರ್ಷಿಕೆ ನೀಡಿ ಪ್ರಾನ್ಸ್‌ 24 ಮಾಧ್ಯಮವು ವರದಿ ಮಾಡಿದೆ. ವರದಿಯಲ್ಲಿ ಮೋದಿ ಮುಸ್ಲಿಮರನ್ನು  “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಕಾಂಗ್ರೆಸ್‌ನ್ನು ಉದ್ದೇಶಿಸಿ, ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ ಎಂದು ಹೇಳಲಾಗಿದೆ, ಆದರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹಿಂದೂ ಅಥವಾ ಮುಸ್ಲಿಂ ಪದ ಬಳಕೆ ಮಾಡಲಾಗಿಲ್ಲ ಎಂದು ಉಲ್ಲೇಖಿಸಿದೆ.

ಭಾರತದ ಚುನಾವಣಾ ರ್ಯಾಲಿಯಲ್ಲಿ ಮುಸ್ಲಿಮರನ್ನು ‘ನುಸುಳುಕೋರರು’ ಎಂದು ಕರೆದಿದ್ದಕ್ಕಾಗಿ ಮೋದಿ ವಿರುದ್ಧ ದ್ವೇಷದ ಭಾಷಣದ ಆರೋಪ ಎಂಬ ಶೀರ್ಷಿಕೆಯ ಸುದ್ದಿಯನ್ನು ಅಮೆರಿಕಾದ ಟೆಲಿವಿಷನ್‌ ನೆಟ್‌ವರ್ಕ್‌ ಎಬಿಸಿ ನ್ಯೂಸ್‌ ವರದಿ ಮಾಡಿದೆ. ಭಾರತದ ಇತಿಹಾಸದಲ್ಲಿ, ಯಾವುದೇ ಪ್ರಧಾನಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಕಡಿಮೆ ಮಾಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಬರೆದಿರುವ ಪೋಸ್ಟ್‌ನ್ನು ಎಬಿಸಿ ನ್ಯೂಸ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಕತಾರ್‌ ಮೂಲದ ಅಲ್‌ ಜಝೀರಾ ಮಾಧ್ಯಮವು ಈ ಕುರಿತು ವರದಿಯನ್ನು ಮಾಡಿದ್ದು, ‘ಒಳನುಸುಳುಕೋರರು’: ಭಾರತದ ಚುನಾವಣೆಯ ಮಧ್ಯೆ ಮೋದಿ ವಿರುದ್ಧ ಮುಸ್ಲಿಂ ವಿರೋಧಿ ದ್ವೇಷ ಭಾಷಣವನ್ನು ಆರೋಪ’ ಎಂದು ಶೀರ್ಷಿಕೆಯಲ್ಲಿ ಸುದ್ದಿಯನ್ನು ಬಿತ್ತರಿಸಿದೆ.

ಮೋದಿ ಭಾಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌ ಮುಸ್ಲಿಮರನ್ನು ‘ನುಸುಳುಕೋರರು’ ಎಂದ ಮೋದಿ ಎಂದು ವರದಿಯನ್ನು ಮಾಡಿದೆ. ವರದಿಯಲ್ಲಿ ಮೋದಿ ಮುಸ್ಲಿಮರನ್ನು  “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಅಮೆರಿಕ ಮೂಲದ ‘ಟೈಮ್‌ ಮ್ಯಾಗಝಿನ್‌’ ಈ ಕುರಿತು ವರದಿಯನ್ನು ಮಾಡಿದೆ, ಭಾರತದ ಪ್ರಧಾನಿ ಮೋದಿ ಮುಸ್ಲಿಮರ ವಿರುದ್ಧ ಪ್ರಚಾರ ರ‍್ಯಾಲಿಯಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಇದಲ್ಲದೆ ವಾಷಿಂಗ್ಟನ್‌ ಪೋಸ್ಟ್‌, ಸಿಎನ್‌ಎನ್‌, ಸೇರಿದಂತೆ ವಿವಿಧ ಜಾಗತಿಕ ಮಾಧ್ಯಮಗಳು ಮೋದಿಯ ಮುಸ್ಲಿಮರ ವಿರುದ್ಧದ ದ್ವೇಷದ ಭಾಷಣವನ್ನು ವರದಿ ಮಾಡಿದ್ದು, ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

ಇದನ್ನು ಓದಿ: ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...