Homeಕರ್ನಾಟಕಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಹಾಸನದ ಪೆನ್‌ಡ್ರೈವ್‌ ವೈರಲ್‌ ಕೇಸ್‌ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು, ಇದೀಗ ಈ ಸುದ್ದಿ ಅಂತರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲೂ ವರದಿಯಾಗಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಓದುಗರನ್ನು, ವೀಕ್ಷಕರನ್ನು ಹೊಂದಿರುವ ಬಿಬಿಸಿ ಹಾಗೂ ಅಲ್‌ಜಝೀರಾ ಸುದ್ದಿ ಮಾಧ್ಯಮಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪ್ರಜ್ವಲ್ ಪ್ರಕರಣದ ಬಗ್ಗೆ ವಿವರವಾದ ವರದಿ ಪ್ರಕಟಿಸಿವೆ.

ಅಲ್‌ಜಝೀರಾ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ವರದಿಯಲ್ಲಿ 33 ವರ್ಷದ ಪ್ರಜ್ವಲ್ ಚಿತ್ರೀಕರಿಸಿದ ಸುಮಾರು 3,000 ವೀಡಿಯೋಗಳ ಸೋರಿಕೆಯಾಗಿದೆ, ಬಹುಪಾಲು ಮಹಿಳೆಯರ ಮೇಲೆ ಲೈಂಗಿಕ ಕಿರುಕುಳವನ್ನು ವಿಡಿಯೋ ತೋರಿಸುತ್ತಿದೆ, ಇದು ಚುನಾವಣೆಯ ಹೊಸ್ತಿಲಲ್ಲಿ ಎನ್‌ಡಿಎ ವಿರುದ್ಧ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿದೆ ಎಂದು ಉಲ್ಲೇಖಿಸಿದೆ.

ಪ್ರಜ್ವಲ್ ವಿರುದ್ಧದ ಆರೋಪಗಳು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಥವಾ ರಾಷ್ಟ್ರೀಯವಾಗಿ ಪ್ರಧಾನಿಗೆ ಹಾನಿಯನ್ನುಂಟುಮಾಡುತ್ತವೆಯೇ ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಪಕ್ಷ ಮತ್ತು ಮೋದಿಯ ಮತದಾರರು ಇದನ್ನು ನಿರ್ಲಕ್ಷಿಸುತ್ತಾರೆ ಎಂದು ಲೇಖಕ ಮತ್ತು ರಾಜಕೀಯ ವಿಶ್ಲೇಷಕ ರಶೀದ್ ಕಿದ್ವಾಯಿ ಹೇಳಿಕೆಯನ್ನು ಅಲ್ ಜಝೀರಾ ಉಲ್ಲೇಖಿಸಿದೆ. 2023ರಲ್ಲಿ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥರಾಗಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೇಶದ ಹಲವು ಪ್ರಮುಖ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರೂ,  ಸಿಂಗ್ ಜಾಮೀನಿನ ಮೇಲೆ ಈಗ ಸ್ವತಂತ್ರವಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಪ್ರಜ್ವಲ್ ರೇವಣ್ಣ: ಕರ್ನಾಟಕದ ಸಂಸದರ ‘ಲೈಂಗಿಕ ದೌರ್ಜನ್ಯ’ ವಿಡಿಯೋ ವಿರುದ್ಧ ಆಕ್ರೋಶ’ ಎಂಬ ಶೀರ್ಷಿಕೆಯಲ್ಲಿ ಲಂಡನ್‌ ಮೂಲದ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿ ವರದಿಯನ್ನು ಮಾಡಿದೆ. ವರದಿಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಕುಮಾರಸ್ವಾಮಿ ಮತ್ತು ಎಚ್‌ಡಿ ರೇವಣ್ಣ, ಪ್ರಜ್ವಲ್‌ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯ ಜೊತೆ ನಿಂತಿರುವ ಪೋಟೋವನ್ನು ಕೂಡ ಪ್ರಕಟಿಸಿದೆ.

ಭಾರತೀಯ ಸಂಸದರೊಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತೋರಿಸುವ ಸಾವಿರಾರು ವಿಡಿಯೋಗಳು ಕರ್ನಾಟಕದಲ್ಲಿ ಹರಿದಾಡಿದೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಬಿಬಿಸಿ ವರದಿಯಲ್ಲಿ ಉಲ್ಲೇಖಿಸಿದೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾದ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಪಕ್ಷ ಮತ್ತು ನಾಯಕತ್ವಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.ಎಸ್‌ಐಟಿ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣಗೆ ತನಿಖೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿದ್ದಾರೆ. 24 ಗಂಟೆಗಳ ಒಳಗೆ ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.  ಇದರ ಬೆನಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೊಟೀಸ್‌ ಜಾರಿ ಮಾಡಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...