Homeಮುಖಪುಟಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಇಳಿದ ತೈಲ ಬೆಲೆ: ಆದರೆ ಭಾರತದಲ್ಲಿ ಹೆಚ್ಚಳದ ಭೀತಿ..!!

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಇಳಿದ ತೈಲ ಬೆಲೆ: ಆದರೆ ಭಾರತದಲ್ಲಿ ಹೆಚ್ಚಳದ ಭೀತಿ..!!

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್‌ನಿಂದಾಗಿ ಪ್ರಮುಖ ಆರ್ಥಿಕತೆ ಕುಸಿದ ಕಾರಣ ಅಂತರರಾಷ್ಟ್ರೀಯ ತೈಲ ಬೆಲೆಯು 17 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ತೈಲದ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಭಾರತದಲ್ಲಿ ಕಚ್ಚಾ ತೈಲ ಆಮದು ವೆಚ್ಚ ಸರಾಸರಿ ಐದನೇ ಒಂದು ಭಾಗದಷ್ಟು ಕುಸಿದಿದೆ. ಭಾರತದಲ್ಲಿ ಮಾರ್ಚ್ 16 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಥಾಸ್ಥಿತಿ ಕಾಪಾಡಲಾಗಿದೆ. ಕೊರೊನ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಸರ್ಕಾರ ಇನ್ನಷ್ಟು ಪ್ರಯತ್ನಿಸಿದ ಕೂಡಲೇ ಮತ್ತೂ ಅಬಕಾರಿ ಸುಂಕ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ.

ಬ್ರೆಂಟ್ ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 6.62% ರಷ್ಟು ಇಳಿದು ಬ್ಯಾರಲ್‌ಗೆ 23.28 ಡಾಲರ್‌ರಷ್ಟು ತಲುಪಿದೆ. ತೈಲ ಬೆಲೆಯ ಮತ್ತೊಂದು ಮಾನದಂಡವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೆಟ್ (WTI) ಬೆಲೆ 5% ಕ್ಕಿಂತ ಕಡಿಮೆಯಾಗಿ ಬ್ಯಾರೆಲ್‌ಗೆ 20 ಡಾಲರಿನಷ್ಟು ಇಳಿದಿದೆ.

ಕೊರೊನ ವೈರಸ್ ಕಾರಣದಿಂದಾಗಿ ತೈಲದ ಬೇಡಿಕೆ ಕಡಿಮೆಯಾಗುವುದರ ಜೊತೆಗೆ, ಸೌದಿ ಅರೇಬಿಯಾ ಮತ್ತು ರಷ್ಯಾ ನಡುವಿನ ತೈಲ ಬೆಲೆಯ ಮೇಲಿನ ಸಂಘರ್ಷವೂ ಕಚ್ಚಾ ಬೆಲೆಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಕೇಂದ್ರ ಸರಕಾರಕ್ಕೆ ಇದು ಅನಿರೀಕ್ಷಿತ ಲಾಭವಾಗಿದೆ.

ಪೆಟ್ರೋಲಿಯಂ ರಿಫೈನರ್‌ ದಾಸ್ತಾನುಗಳ ನಷ್ಟವನ್ನು ಸರಿದೂಗಿಸಲು ಮಾರ್ಚ್ 16ರಿಂದ ಭಾರತದಲ್ಲಿ ವಾಹನ ಇಂಧನಗಳ ಬೆಲೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಗಳು ಮತ್ತು ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನ ವೈರಸ್ ವಿರುದ್ಧದ ಹೋರಾಟಕ್ಕೆ ಧನಸಹಾಯ ನೀಡುವ ಸಲುವಾಗಿ ಆದಾಯವನ್ನು ಹೆಚ್ಚಿಸಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ಚಿಂತಿಸುತ್ತಿದೆ.

ಮಾರ್ಚ್ 14 ರಂದು ಸರ್ಕಾರ ಎರಡು ಇಂಧನಗಳ ಅಬಕಾರಿ ಸುಂಕವನ್ನು ಲೀಟರ್ 3 ರೂಪಾಯಿಯಂತೆ ಏರಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 1 ರೂ ಹೆಚ್ಚಳ ಮಾಡುವುದರಿಂದ ಸರ್ಕಾರಕ್ಕೆ ವಾರ್ಷಿಕ ಆದಾಯ 14,500 ಕೋಟಿ ರೂ. ಹೆಚ್ಚುವರಿ ಆಗಲಿದೆ.

ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಸರಾಸರಿ ಕಚ್ಚಾ ತೈಲ ಖರೀದಿ ಬೆಲೆ ಶುಕ್ರವಾರ ಬ್ಯಾರೆಲ್‌ಗೆ 1,805.22 ರೂ.ಗೆ ತೀವ್ರವಾಗಿ ಕುಸಿದಿದೆ. ಮಾರ್ಚ್ 16 ರಂದು ತೈಲ ಸಂಸ್ಕರಣಕಾರರು ಕೊನೆಯದಾಗಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 16 ಪೈಸೆ ಮತ್ತು ಲೀಟರ್‌ಗೆ 15 ಪೈಸೆಯಷ್ಟು ಬೆಲೆಯನ್ನು ಕಡಿತಗೊಳಿಸಿದ್ದಾರೆ.

ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 69.59 ರೂ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ಗೆ 62.29 ರೂಪಾಯಿ.

“ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಸನ್ನಿಹಿತವಾಗಿದೆ ಮತ್ತು ಅದರ ಅಂತಿಮ ನಿರ್ಧಾರವನ್ನು ಹಣಕಾಸು ಸಚಿವಾಲಯ ತೆಗೆದುಕೊಳ್ಳುತ್ತದೆ” ಎಂದು ಹೆಸರು ಹೇಳಲು ಇಚ್ಛಿಸದ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...