Homeಮುಖಪುಟಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಇಳಿದ ತೈಲ ಬೆಲೆ: ಆದರೆ ಭಾರತದಲ್ಲಿ ಹೆಚ್ಚಳದ ಭೀತಿ..!!

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಇಳಿದ ತೈಲ ಬೆಲೆ: ಆದರೆ ಭಾರತದಲ್ಲಿ ಹೆಚ್ಚಳದ ಭೀತಿ..!!

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್‌ನಿಂದಾಗಿ ಪ್ರಮುಖ ಆರ್ಥಿಕತೆ ಕುಸಿದ ಕಾರಣ ಅಂತರರಾಷ್ಟ್ರೀಯ ತೈಲ ಬೆಲೆಯು 17 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ತೈಲದ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಭಾರತದಲ್ಲಿ ಕಚ್ಚಾ ತೈಲ ಆಮದು ವೆಚ್ಚ ಸರಾಸರಿ ಐದನೇ ಒಂದು ಭಾಗದಷ್ಟು ಕುಸಿದಿದೆ. ಭಾರತದಲ್ಲಿ ಮಾರ್ಚ್ 16 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಥಾಸ್ಥಿತಿ ಕಾಪಾಡಲಾಗಿದೆ. ಕೊರೊನ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಸರ್ಕಾರ ಇನ್ನಷ್ಟು ಪ್ರಯತ್ನಿಸಿದ ಕೂಡಲೇ ಮತ್ತೂ ಅಬಕಾರಿ ಸುಂಕ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ.

ಬ್ರೆಂಟ್ ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 6.62% ರಷ್ಟು ಇಳಿದು ಬ್ಯಾರಲ್‌ಗೆ 23.28 ಡಾಲರ್‌ರಷ್ಟು ತಲುಪಿದೆ. ತೈಲ ಬೆಲೆಯ ಮತ್ತೊಂದು ಮಾನದಂಡವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೆಟ್ (WTI) ಬೆಲೆ 5% ಕ್ಕಿಂತ ಕಡಿಮೆಯಾಗಿ ಬ್ಯಾರೆಲ್‌ಗೆ 20 ಡಾಲರಿನಷ್ಟು ಇಳಿದಿದೆ.

ಕೊರೊನ ವೈರಸ್ ಕಾರಣದಿಂದಾಗಿ ತೈಲದ ಬೇಡಿಕೆ ಕಡಿಮೆಯಾಗುವುದರ ಜೊತೆಗೆ, ಸೌದಿ ಅರೇಬಿಯಾ ಮತ್ತು ರಷ್ಯಾ ನಡುವಿನ ತೈಲ ಬೆಲೆಯ ಮೇಲಿನ ಸಂಘರ್ಷವೂ ಕಚ್ಚಾ ಬೆಲೆಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಕೇಂದ್ರ ಸರಕಾರಕ್ಕೆ ಇದು ಅನಿರೀಕ್ಷಿತ ಲಾಭವಾಗಿದೆ.

ಪೆಟ್ರೋಲಿಯಂ ರಿಫೈನರ್‌ ದಾಸ್ತಾನುಗಳ ನಷ್ಟವನ್ನು ಸರಿದೂಗಿಸಲು ಮಾರ್ಚ್ 16ರಿಂದ ಭಾರತದಲ್ಲಿ ವಾಹನ ಇಂಧನಗಳ ಬೆಲೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಗಳು ಮತ್ತು ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನ ವೈರಸ್ ವಿರುದ್ಧದ ಹೋರಾಟಕ್ಕೆ ಧನಸಹಾಯ ನೀಡುವ ಸಲುವಾಗಿ ಆದಾಯವನ್ನು ಹೆಚ್ಚಿಸಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ಚಿಂತಿಸುತ್ತಿದೆ.

ಮಾರ್ಚ್ 14 ರಂದು ಸರ್ಕಾರ ಎರಡು ಇಂಧನಗಳ ಅಬಕಾರಿ ಸುಂಕವನ್ನು ಲೀಟರ್ 3 ರೂಪಾಯಿಯಂತೆ ಏರಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 1 ರೂ ಹೆಚ್ಚಳ ಮಾಡುವುದರಿಂದ ಸರ್ಕಾರಕ್ಕೆ ವಾರ್ಷಿಕ ಆದಾಯ 14,500 ಕೋಟಿ ರೂ. ಹೆಚ್ಚುವರಿ ಆಗಲಿದೆ.

ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಸರಾಸರಿ ಕಚ್ಚಾ ತೈಲ ಖರೀದಿ ಬೆಲೆ ಶುಕ್ರವಾರ ಬ್ಯಾರೆಲ್‌ಗೆ 1,805.22 ರೂ.ಗೆ ತೀವ್ರವಾಗಿ ಕುಸಿದಿದೆ. ಮಾರ್ಚ್ 16 ರಂದು ತೈಲ ಸಂಸ್ಕರಣಕಾರರು ಕೊನೆಯದಾಗಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 16 ಪೈಸೆ ಮತ್ತು ಲೀಟರ್‌ಗೆ 15 ಪೈಸೆಯಷ್ಟು ಬೆಲೆಯನ್ನು ಕಡಿತಗೊಳಿಸಿದ್ದಾರೆ.

ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 69.59 ರೂ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ಗೆ 62.29 ರೂಪಾಯಿ.

“ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಸನ್ನಿಹಿತವಾಗಿದೆ ಮತ್ತು ಅದರ ಅಂತಿಮ ನಿರ್ಧಾರವನ್ನು ಹಣಕಾಸು ಸಚಿವಾಲಯ ತೆಗೆದುಕೊಳ್ಳುತ್ತದೆ” ಎಂದು ಹೆಸರು ಹೇಳಲು ಇಚ್ಛಿಸದ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...