Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...