ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.
ಹೌದು, ಉತ್ತರಾಖಂಡದ 38 ವರ್ಷದ ದಿಲ್ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.
ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್ನ ಗಾಂಧಿ ಪಾರ್ಕ್ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.
“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್ರಾಜ್ ಕೌರ್ ಹೇಳುತ್ತಾರೆ.
ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು
ದಿಲ್ರಾಜ್ ಕೌರ್ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್, ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.
ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್ರಾಜ್ ಕೌರ್ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್ರಾಜ್ ಕೌರ್ ವೈವಾಹಿಕ ಜೀವನ ಮುರಿದು ಬಿದ್ದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ದಿಲ್ರಾಜ್ ಕೌರ್ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್ಗಳು ಹರಿದಾಡುತ್ತಿವೆ.
Para-shooter Dilraj Kaur is forced to sell chips and snacks near a park in Dehradun to make a living. Watch her story.#NewsMo #Vertical #DilrajKaur #ParaShooter pic.twitter.com/sjSmtI5Xla
— IndiaToday (@IndiaToday) June 23, 2021
ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್ರಾಜ್ ಕೌರ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ
ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.
Exactly…. Sports authority.. Should take care of sports women specially.. I respect and request to give support Her