Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...