Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...