Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...