Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...