Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...