Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...