Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...