Homeಮುಖಪುಟಅಂತಾರಾಷ್ಟ್ರೀಯ ಮಹಿಳಾ ದಿನ; ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಅಂತಾರಾಷ್ಟ್ರೀಯ ಮಹಿಳಾ ದಿನ; ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಅಧಿಕಾರ ಮತ್ತು ಅಧೀನತೆಯ ಸೂತ್ರವನ್ನು ನಿರಂತರವಾಗಿ ಉಳಿಸುವುದೇ ಪಿತೃಪ್ರಧಾನ ವ್ಯವಸ್ಥೆಯ ಮುಖ್ಯ ತಂತ್ರಗಾರಿಕೆ. ಈ ಸೂತ್ರಕ್ಕೆ ಬದ್ಧವಾಗಿ ಉಳಿಯುವಂತೆ ಜನರನ್ನು ಒತ್ತಾಯಿಸುವ ತರಬೇತಿಯನ್ನು ಅದು ಈ ವ್ಯವಸ್ಥೆಯ ಎಲ್ಲ ಸಾಂಸ್ಥಿಕ ವಲಯಗಳಲ್ಲಿಯೂ ಜಾರಿಯಲ್ಲಿ ಇಟ್ಟಿದೆ. ಹಾಗಾಗಿ ಯಾರಿಗೂ ಈ ತರಬೇತಿಯ ಪಾಠಗಳಿಂದ ಮುಕ್ತಿಯಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರವೇ ಈ ಪಾಠಗಳನ್ನು ಮರೆಯುವ ಬಗೆಗಳನ್ನು ಶೋಧಿಸಬೇಕಾಗುತ್ತದೆ.

- Advertisement -
- Advertisement -

ಸ್ತ್ರೀವಾದ ಹೋರಾಟ ಪ್ರತಿ ಪುರುಷ ಮತ್ತು ಮಹಿಳೆ ವೈಯಕ್ತಿಕವಾಗಿಯೇ ನಿಭಾಯಿಸಬೇಕಾದ ಹೊಣೆ

ಸ್ತ್ರಿವಾದ ಹೋರಾಟ ಪ್ರತಿ ಪುರುಷ ಮತ್ತು ಮಹಿಳೆ ವೈಯಕ್ತಿಕವಾಗಿಯೇ ನಿಭಾಯಿಸಬೇಕಾದ ಹೊಣೆ
ಮಾನವರು ಸಮುದಾಯಗಳಾಗಿ ಬದುಕಲು ತೊಡಗಿದ ಆರಂಭದಲ್ಲಿ ಗಂಡು ಮತ್ತು ಹೆಣ್ಣುಗಳೆಂಬ ತಾರತಮ್ಯಗಳೇನೂ ಇರಲಿಲ್ಲ. ಮುಂದುವರೆದ ಒಂದು ಹಂತದಲ್ಲಿ ಗಂಡಸರ ಪ್ರಾಬಲ್ಯಕ್ಕೆ ಹೆಚ್ಚಿನ ಅವಕಾಶಗಳು ತೆರೆದುಕೊಂಡವು. ಇದನ್ನೇ ನಿರಂತರವಾಗಿಸುವ ಪ್ರಯತ್ನಗಳಲ್ಲಿ ಗಂಡಸರು ತಮ್ಮ ಜೊತೆಗೇ ಇದ್ದ ಹೆಂಗಸರ ಮೇಲೆ ಅಧಿಕಾರವನ್ನು ಸ್ಥಾಪಿಸುವ ಪ್ರಯತ್ನಗಳಲ್ಲಿ ತೊಡಗಿದರು. ಗಂಡು ಮತ್ತು ಹೆಣ್ಣುಗಳ ಸಂಬಂಧಗಳಲ್ಲಿ ಯಜಮಾನಿಕೆ ಮತ್ತು ಅಧೀನತೆ ಎಂಬ ಶ್ರೇಣೀಕರಣ ಮೊದಲಾಯಿತು.

ಇದೇ ಮಾನವ ಚರಿತ್ರೆಯಲ್ಲಿ ಕಾಣಿಸಿಕೊಂಡ ಮೊತ್ತಮೊದಲ ಶ್ರೇಣೀಕರಣ ಎಂದು ಏಂಗೆಲ್ಸ್ ಗುರುತಿಸುತ್ತಾನೆ. ಮುಂದೆ ಈ ತಂತ್ರಗಾರಿಕೆಯೇ ಪ್ರಯೋಗಗೊಳ್ಳುತ್ತಾ ಜಾತಿ, ಜನಾಂಗ, ಕೋಮು, ವರ್ಗ ಎಂಬ ಲೆಕ್ಕವಿಲ್ಲದಷ್ಟು ಶ್ರೇಣೀಕರಣಗಳು ಜಾರಿಗೊಂಡವು. ಎಲ್ಲ ಬಗೆಯ ಶ್ರೇಣೀಕರಣಗಳೂ ಪ್ರಬಲರಾದವರು ದುರ್ಬಲರಾದವರ ಮೇಲೆ ಅಧಿಕಾರವನ್ನು ಸ್ಥಾಪಿಸುವ ತಂತ್ರಗಾರಿಕೆಗಳೇ ಆಗಿವೆ. ಇಂದಿಗೂ ಸಮಾಜ ವ್ಯವಸ್ಥೆ ಎಂದರೆ ಅಧಿಕಾರ ಮತ್ತು ಅಧೀನತೆಗಳ ಸಂಘರ್ಷ ಮಾತ್ರವೇ ಆಗಿದೆ. ಕಲ್ಪಿತ ಶತ್ರುವಿನೊಂದಿಗೆ ನಡೆಸುತ್ತಿರುವ ಈ ಸಂಘರ್ಷವು ಎಂದಿಗೂ ಮುಗಿಯಲಾರದು. ಈ ಎಲ್ಲ ಸಂಗತಿಗಳನ್ನೂ ಸಾಮಾಜಿಕ ಕಳಕಳಿಯ ಚಿಂತನಶೀಲರೂ, ಸಂವೇದನಾಶೀಲರೂ ಚರ್ಚಿಸುತ್ತಲೇ ಬಂದಿದ್ದಾರೆ.

ಸ್ತ್ರೀವಾದೀ ಚಿಂತನೆಯು ಕೂಡಾ ಪುರುಷರನ್ನು ಶತ್ರುವಾಗಿ ಕಲ್ಪಿಸಿಕೊಂಡೇ ಹುಟ್ಟಿದ್ದು. ಆದರೆ ಇಂದು ಈ ಚಿಂತನೆಯು ಅತ್ಯಂತ ಸೂಕ್ಷ್ಮವಾದ ದಾರ್ಶನಿಕ ಒಳನೋಟಗಳನ್ನು ಕಾಣಿಸಬಲ್ಲ ಪ್ರಬುದ್ಧತೆಯದಾಗಿ ಬೆಳೆದಿದೆ. ಎಲ್ಲ ದುರ್ಬಲ ಸಮುದಾಯಗಳೂ ನಿರಂತರವಾಗಿ ತೊಡಗಿಕೊಂಡೇ ಬರುತ್ತಿರುವ ಹೋರಾಟಗಳಿಗೆ ದಾರಿಗಳನ್ನು ಕಾಣಿಸಬಲ್ಲ ಸಾಮರ್ಥ್ಯ ಈ ಸ್ತ್ರೀವಾದೀ ದಾರ್ಶನಿಕ ನೋಟಕ್ಕೆ ಇದೆ. ಯಾವುದೇ ಹೋರಾಟಗಳು ಹೊಂದಿರಬಹುದಾದ ವೈಚಾರಿಕ ಆಶಯಗಳು, ಸಾಮರ್ಥ್ಯಗಳು ಕೇವಲ ಆರಂಭಿಕ ಬಿಂದುಗಳು ಮಾತ್ರವೇ ಆಗಿರುತ್ತವೆ; ಇವುಗಳ ನಿರ್ಣಾಯಕ ಅಂತ್ಯವಾಗಿ ಅವು ನಮ್ಮ ಜೀವನಕ್ರಮಗಳಲ್ಲಿ ಕ್ರಿಯಾಶೀಲವಾಗಬೇಕು ಎಂಬ ಒಳನೋಟವನ್ನು ಸ್ತ್ರೀವಾದೀ ದಾರ್ಶನಿಕತೆಯು ನೀಡುತ್ತದೆ. ಸಮಾಜವ್ಯವಸ್ಥೆಯಲ್ಲಿ ನಿರ್ಮಾಣಗೊಂಡಿರುವ ಶ್ರೇಣೀಕರಣಗಳೂ, ಆ ಕುರಿತು ನಡೆಯುತ್ತಿರುವ ಸಾಮಾಜಿಕ ಹೋರಾಟಗಳೂ ಈ ಮಾತನ್ನು ಗಮನಿಸುವ ಅಗತ್ಯವಿದೆ.

ಇಂದಿನ ಸ್ತ್ರೀವಾದಿಗಳು ಎಲ್ಲರೂ ಸ್ತ್ರೀವಾದಿಗಳಾಗೋಣ, ಸ್ತ್ರೀವಾದವು ನಮ್ಮೆಲ್ಲರ
ಅಗತ್ಯವೇ ಆಗಿದೆ ಎಂದು ಹೇಳುತ್ತಿದ್ದಾರೆ. ಈವರೆಗೂ ಸ್ತ್ರೀವಾದ ಎಂದರೆ ಪುರುಷರೊಂದಿಗೆ ಸಾಮಾಜಿಕ ಸಮಾನತೆ, ಮಹಿಳಾ ಸ್ವಾತಂತ್ರ್ಯ ಎಂಬ ಮಾತುಗಳೇ ಕೇಳಿಬರುತ್ತಿದ್ದವು. ಈಗ ಇದ್ದಕ್ಕಿದ್ದಂತೆ ಸ್ತ್ರೀವಾದವನ್ನು ಎಲ್ಲರ ಅಗತ್ಯ ಎಂದು ಹೇಳಿದರೆ ಸುಲಭವಾಗಿ ನಂಬಲಾಗದು. ಆದರೆ ಇದು ತುಂಬಾ ಸೂಕ್ಷ್ಮವಾದ ಒಂದು ಚಿಂತನೆ. ಎಲ್ಲ ಬಗೆಯ ಸಾಮಾಜಿಕ ಶ್ರೇಣೀಕರಣಗಳಲ್ಲಿಯೂ ಪುರುಷರು ಮತ್ತು ಮಹಿಳೆಯರು ಹೆಚ್ಚೂಕಡಿಮೆ ಸಮಸಂಖ್ಯೆಯಲ್ಲಿ ಇದ್ದಾರೆ. ಇವರಿಬ್ಬರ ನಡುವೆ ಸಮಾಜ ವ್ಯವಸ್ಥೆ ಎಂಬ ಅಧಿಕಾರ ಕೇಂದ್ರವು ಶತ್ರುತ್ವವನ್ನು ಹುಟ್ಟುಹಾಕಿದೆ.

ನಮ್ಮಲ್ಲಿ ನಡೆಯುತ್ತಾ ಬಂದಿರುವ ವೈಚಾರಿಕ ಚರ್ಚೆಗಳು ಇವನ್ನೆಲ್ಲಾ ಬಿಡಿಬಿಡಿಯಾಗಿ ಸೂಕ್ಷ್ಮ್ಮಗಳಲ್ಲಿ ವಿವರಿಸುತ್ತಿವೆ. ಇಂಥ ಚರ್ಚೆಗಳ ಕೊನೆಯಲ್ಲಿ, ಸಾಧಾರಣವಾಗಿ, ಸಮಾಜವು ಬದಲಾಗಬೇಕು, ಮುಖ್ಯವಾಗಿ ಪುರುಷರ ಮನಸ್ಥಿತಿಯಲ್ಲಿ ಪರಿವರ್ತನೆಗಳು ಬರಬೇಕು ಎಂಬ ಅಮೂರ್ತವಾದ ಮಾತುಗಳಷ್ಟೇ ಕೇಳಿಸುತ್ತವೆ. ವೈಚಾರಿಕ ಚರ್ಚೆಗಳಲ್ಲಿ ಅಮೂರ್ತವಾಗಿಯೇ ಉಳಿದುಬಿಡುವ ಆಶಯಗಳು ನಮ್ಮೆಲ್ಲರ ಬದುಕುಗಳಲ್ಲಿ, ನಮ್ಮ ಜೀವನ ಕ್ರಮಗಳ ಎಲ್ಲ ಕ್ಷಣಗಳಲ್ಲಿಯೂ ಸಾಕಾರಗೊಳ್ಳುವ ಹಾದಿಗಳನ್ನು ಕುರಿತು ಸ್ತ್ರೀವಾದೀ ದಾರ್ಶನಿಕತೆಯು ಮಾತನಾಡುತ್ತದೆ.

ಆದರೆ ಈ ಯಾವ ಮಾತುಗಳನ್ನೂ ಒಂದು ವೈಚಾರಿಕ ಆಕೃತಿಯಾಗಿ ಕಟ್ಟಿ ನಿರೂಪಿಸಲು ಸಾಧ್ಯವಾಗುವುದಿಲ್ಲ. ಇದೊಂದು ಬಗೆಯ ವಿಶಿಷ್ಟವೂ, ಕ್ರಾಂತಿಕಾರಿಯೂ ಆದ ಹೋರಾಟದ ಬಗೆ. ಇಲ್ಲಿ ಪ್ರತಿಯೊಬ್ಬರೂ ಸಹಭಾಗಿಗಳು. ಇಲ್ಲಿ ನೇತಾರರೆನಿಸಿ, ಮಾರ್ಗದರ್ಶಕರೆನಿಸಿ ಯಾರೂ ನಿಂತಿರುವುದಿಲ್ಲ. ಇಲ್ಲಿ ಯಾರೂ ಹಿಂಬಾಲಕರಲ್ಲ. ಇಲ್ಲಿನ ಹೋರಾಟದ ಒಟ್ಟು ಚಿಂತನೆ ಸಾಮುದಾಯಿಕವಾದದ್ದೇ. ಆದರೆ ಹೋರಾಟವು ಮಾತ್ರ ಪ್ರತಿಯೊಬ್ಬರೂ ವೈಯಕ್ತಿಕವಾಗಿಯೇ ನಿಭಾಯಿಸಬೇಕಾದ ಹೊಣೆ ಎನಿಸಿ ನಿರಂತರವಾಗಿ ನಡೆಯಬೇಕು.

ಮಹಿಳೆಯರು ಮತ್ತು ಪುರುಷರು ತೀರಾ ವೈಯಕ್ತಿಕ ನೆಲೆಗಳಿಂದ ತೊಡಗಿ ಹಲವಾರು ಸಾರ್ವಜನಿಕ ವಲಯಗಳಲ್ಲಿ ಭೇಟಿಯಾಗುತ್ತಿರುತ್ತಾರೆ. ಅವರ ನಡುವೆ ಬರುವ ಹಲವು ಬಗೆಯ ಸಂಬಂಧಗಳಲ್ಲಿ ಅವೆಷ್ಟೋ ಮಾತುಕತೆಗಳು ನಡೆಯುತ್ತವೆ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಅವೆಷ್ಟೋ ರೂಢಿಗತ ವರ್ತನಾವಿಧಾನಗಳೂ ಇರುತ್ತವೆ. ಈ ಎಲ್ಲ ಕ್ಷಣಗಳಲ್ಲಿಯೂ ನಮ್ಮ ನಮ್ಮ ಮಾತುಕತೆಗಳನ್ನು, ವರ್ತನಾವಿಧಾನಗಳನ್ನು ಸೂಕ್ಷ್ಮ ಸಂವೇದನೆಗಳಲ್ಲಿ ಗಮನಿಸಿಕೊಳ್ಳಲು ನಮಗೆ ಸಾಧ್ಯವಾಗಲು ತೊಡಗಿದರೆ, ಹೋರಾಟವು ಸರಿದಾರಿಯಲ್ಲಿ ಸಾಗಿದೆ ಎಂದೇ ಅರ್ಥ. ಆದರೆ ಈ ಗಮನಿಸುವಿಕೆ ಮತ್ತು ತಿದ್ದಿಕೊಳ್ಳುವ ಕ್ರಿಯೆ ಎಂದರೆ ಒಮ್ಮೆಗೇ ಮುಗಿಯುತ್ತದೆ ಎಂದಿಲ್ಲ. ನಮಗೇ ತಿಳಿಯದೆಯೂ ನಾವು ಹಳೆಯ ಚಾಳಿಯ ಮಾತುಕತೆಗಳಿಗೆ, ವರ್ತನೆಗಳಿಗೆ ಹೊರಳಿಬಿಟ್ಟಿರುತ್ತೇವೆ. ಈ ಸೂಕ್ಷ್ಮದ ಎಚ್ಚರದಲ್ಲಿ ನಾವು ಸದಾಕಾಲವೂ ಇರಬೇಕಾಗುತ್ತದೆ.

ಅಧಿಕಾರ ಮತ್ತು ಅಧೀನತೆಯ ಸೂತ್ರವನ್ನು ನಿರಂತರವಾಗಿ ಉಳಿಸುವುದೇ ಪಿತೃಪ್ರಧಾನ ವ್ಯವಸ್ಥೆಯ ಮುಖ್ಯ ತಂತ್ರಗಾರಿಕೆ. ಈ ಸೂತ್ರಕ್ಕೆ ಬದ್ಧವಾಗಿ ಉಳಿಯುವಂತೆ ಜನರನ್ನು ಒತ್ತಾಯಿಸುವ ತರಬೇತಿಯನ್ನು ಅದು ಈ ವ್ಯವಸ್ಥೆಯ ಎಲ್ಲ ಸಾಂಸ್ಥಿಕ ವಲಯಗಳಲ್ಲಿಯೂ ಜಾರಿಯಲ್ಲಿ ಇಟ್ಟಿದೆ. ಹಾಗಾಗಿ ಯಾರಿಗೂ ಈ ತರಬೇತಿಯ ಪಾಠಗಳಿಂದ ಮುಕ್ತಿಯಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರವೇ ಈ ಪಾಠಗಳನ್ನು ಮರೆಯುವ ಬಗೆಗಳನ್ನು ಶೋಧಿಸಬೇಕಾಗುತ್ತದೆ. ಏಕೆಂದರೆ ನಮ್ಮ ಅನುಭವ ಲೋಕದ ಪ್ರೀತಿ, ಗೌರವ, ಸಮಾನತೆ ಎಂಬ ಭಾವನೆಗಳನ್ನು ಮಾತ್ರವೇ ಅಲ್ಲ, ಅವುಗಳನ್ನು ವ್ಯಕ್ತಪಡಿಸುವ ಬಗೆಗಳನ್ನು ಕೂಡಾ ಆ ತರಬೇತಿಯೇ ವ್ಯಾಖ್ಯಾನಿಸಿಬಿಡುತ್ತದೆ.

ಉದಾಹರಣೆಗೆ, ಪುರುಷರು ಮಹಿಳೆಯರಿಗೆ ಪ್ರೀತಿ ಗೌರವಗಳನ್ನು, ವಸ್ತುಗಳನ್ನು ಕೊಡುವ ಮೂಲಕ ತೋರಿಸಬೇಕು, ಮತ್ತು ಮಹಿಳೆಯರು ಆ ಭಾವಗಳನ್ನು ಸೇವೆಯ ಮೂಲಕ ತೋರಿಸಬೇಕು ಎಂಬ ಪಾಠವನ್ನು ನಾವೆಲ್ಲರೂ ಕಲಿತಿದ್ದೇವೆ ಮತ್ತು ಹಾಗೆಯೇ ವರ್ತಿಸುತ್ತೇವೆ. ನಮ್ಮೆಲ್ಲರ ಬದುಕುಗಳ ಎಲ್ಲ ಕ್ಷಣಗಳೂ ಈ ಮಾದರಿಯವೇ ಆಗಿವೆ ಎಂಬುದಕ್ಕೆ ಉದಾಹರಣೆಗಳನ್ನು ಕೊನೆಯಿಲ್ಲದೆ ಜೋಡಿಸುತ್ತಲೇ ಹೋಗಬಹುದು. ಗಂಡಸರಾಗಲೀ, ಹೆಂಗಸರಾಗಲೀ ಇಷ್ಟೆಲ್ಲವನ್ನೂ ಚಿಂತಿಸಿ ಸಂಬಂಧಗಳನ್ನು ನಿಭಾಯಿಸುತ್ತಾರೆ ಎಂದೇನಲ್ಲ. ನಮಗೆ ದೊರೆಯುವ ತರಬೇತಿಗಳು ಅಷ್ಟು ಗಾಢವಾದವು ಎಂಬುದನ್ನು ನಾವು ತಿಳಿಯಬೇಕು.

ಅಧಿಕಾರ ಮತ್ತು ಅಧೀನತೆಯ ಸಮೀಕರಣವು ಮಾತ್ರ ಎಲ್ಲಿಯೂ ಸಡಿಲುಗೊಳ್ಳದಂತೆ ಕಾಯುವ ತರಬೇತಿಯ ರಾಜಕಾರಣವನ್ನು ಸುಲಭದಲ್ಲಿ ಅರ್ಥಮಾಡಿಕೊಳ್ಳುವುದು ಆಗದ ಮಾತು. ಆದರೂ ಈ ರಾಜಕಾರಣವನ್ನು ಭೇದಿಸದ ಹೊರತು ಯಾವ ಹೋರಾಟಗಳಿಗೂ ಅರ್ಥವೇ ಉಳಿಯುವುದಿಲ್ಲ. ಸ್ತ್ರೀವಾದೀ ದಾರ್ಶನಿಕತೆಯು ಈ ಹಾದಿಯಲ್ಲಿ ಬೆಳಕನ್ನು ತೋರುವ ಸಾಮರ್ಥ್ಯದ್ದಾಗಿದೆ. ಮಹಿಳೆಯರೂ, ಪುರುಷರೂ ಕೂಡಿಯೇ ಸ್ತ್ರೀವಾದಿಗಳಾಗಬೇಕು ಎಂದರೆ ಈ ಹಾದಿಯಲ್ಲಿ ನಡೆಯೋಣ ಎಂದಷ್ಟೇ ಅರ್ಥ. ವ್ಯವಸ್ಥೆಯ ತರಬೇತಿಯ ಪಾಠಗಳನ್ನು ನಾವೆಲ್ಲರೂ ಮರೆಯಬೇಕು.

ಅಧಿಕಾರ ಮತ್ತು ಅಧೀನತೆಯ ಸಮೀಕರಣವನ್ನು ನಿರಾಕರಿಸಿ ನಿಲ್ಲಬೇಕು. ಇದು ಮಾತ್ರವೇ ಸಮಸಮಾಜದ ಕನಸುಗಳನ್ನು ಸಾಕಾರಗೊಳಿಸಬಲ್ಲುದು. ಈ ಹೋರಾಟದ ಕ್ರಮವು ಸ್ಪಷ್ಟವಾಗಿದೆ. ವ್ಯವಸ್ಥೆಯು ನೀಡಿದ ತರಬೇತಿಯ ಪಾಠಗಳನ್ನು ಮರೆಯುವುದು ಎಂದರೆ ನಮ್ಮನಮ್ಮ ಮಾತುಕತೆಗಳನ್ನು, ವರ್ತನೆಗಳನ್ನು ಅನುಕ್ಷಣವೂ ಗಮನಿಸಿಕೊಳ್ಳುವ ವಿವೇಚನೆಯನ್ನು ಬೆಳೆಸಿಕೊಳ್ಳುವುದು; ಮತ್ತು ಇದನ್ನೇ ಉಸಿರಾಡುವ, ಜೀವಿಸುವ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು. ಈ ಪ್ರಯತ್ನವು ನಮ್ಮ ಜೀವನ ಕ್ರಮಗಳಲ್ಲಿ ಹಾಸುಹೊಕ್ಕಾಗಿ ನೆಲೆಗೊಳ್ಳಬೇಕು.

ಎಚ್ ಎಸ್ ಶ್ರೀಮತಿ

ಎಚ್ ಎಸ್ ಶ್ರೀಮತಿ
ಕನ್ನಡದ ಸ್ತ್ರೀವಾದಿ ಚಿಂತಕಿ ಮತ್ತು ಲೇಖಕಿ. ಮಹಾಶ್ವೇತಾ ದೇವಿಯವರ ’ರುಡಾಲಿ’, ’ಹಜಾರ್ ಚೌರಾಶೀರ ಮಾ’, ಸಿಮೋನ್ ದ ಬೋವ ಅವರ ‘ದ ಸೆಕಂಡ್ ಸೆಕ್ಸ್’, ಬೆಟ್ಟಿ ಫ್ರೀಡನ್ ಅವರ ’ದ ಫೆಮಿನಿಸ್ಟ್ ಮಿಸ್ಟಿಕ್’, ಬೆಲ್ ಹುಕ್ಸ್ ಅವರ ’ಎಲ್ಲರಿಗಾಗಿ ಸ್ತ್ರೀವಾದ’ ಸೇರಿದಂತೆ ಹಲವು ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಹಲವು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿರುವ ಶ್ರೀಮತಿ ಅವರು ’ಸ್ತ್ರೀವಾದ’, ’ಸ್ತ್ರೀವಾದ : ಪಾರಿಭಾಷಿಕ ಪದಕೋಶ’, ’ಗೌರಿ ದುಃಖ’ ಸೇರಿದಂತೆ ಇನ್ನು ಹಲವಾರು ಪುಸ್ತಕಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ.


ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...