Homeಚಳವಳಿವಾರದಲ್ಲಿ ಕಾಶ್ಮೀರದಲ್ಲಿನ ನಿರ್ಭಂಧ ಸಡಿಲಿಸಿ : ಮೂಲಭೂತ ಹಕ್ಕುಗಳ ದಮನ ಸಲ್ಲ- ಸುಪ್ರೀಂ ಕೋರ್ಟ್‌

ವಾರದಲ್ಲಿ ಕಾಶ್ಮೀರದಲ್ಲಿನ ನಿರ್ಭಂಧ ಸಡಿಲಿಸಿ : ಮೂಲಭೂತ ಹಕ್ಕುಗಳ ದಮನ ಸಲ್ಲ- ಸುಪ್ರೀಂ ಕೋರ್ಟ್‌

ಅಧಿಕಾರಗಳ ಅನಿಯಂತ್ರಿತ ಆಳ್ವಿಕೆಯಿಂದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧವನ್ನು ಹೇರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲವನ್ನು ಅಮಾನತುಗೊಳಿಸುವ ಆದೇಶಗಳನ್ನು ಕೂಡಲೇ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ಅಂತಹ ಅಮಾನತು ಸೀಮಿತ ಅವಧಿಗೆ ಮಾತ್ರ ಇರುತ್ತದೆ ಮತ್ತು ಇದು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ” ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಆರ್ ಸುಭಾಷ್ ರೆಡ್ಡಿ ಮತ್ತು ಬಿ.ಆರ್. ಗವಾಯಿ ಅವರ ನ್ಯಾಯಪೀಠ ಹೇಳಿದೆ. ಒಂದು ವಾರದೊಳಗೆ ನಿರ್ಬಂಧಗಳನ್ನು ಪರಿಶೀಲಿಸುವಂತೆ ಅದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಕಳೆದ 160 ದಿನಗಳಿಂದ ಕಾಶ್ಮೀರ ಕಣಿವೆ ಸಂವಹನ ನಿರ್ಬಂಧದಲ್ಲಿದೆ.

“ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಸಂವಿಧಾನದ 19 ನೇ ಪರಿಚ್ಚೇದದೊಳಗೆ ಅಂತರ್ಜಾಲದ ಹಕ್ಕನ್ನು ಒಳಗೊಂಡಿದೆ. ಆದ್ದರಿಂದ ಅಂತರ್ಜಾಲದಲ್ಲಿನ ನಿರ್ಬಂಧಗಳು ಆರ್ಟಿಕಲ್ 19 (2) ರ ಅಡಿಯಲ್ಲಿ ಅನುಪಾತದ ತತ್ವಗಳನ್ನು ಅನುಸರಿಸಬೇಕಾಗಿದೆ ”ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಅಧಿಕಾರಗಳ ಅನಿಯಂತ್ರಿತ ಆಳ್ವಿಕೆಯಿಂದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧವನ್ನು ಹೇರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಮತ್ತು ಸಂವಹನ ನಿರ್ಬಂಧದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಈ ತೀರ್ಪು ಬಂದಿದೆ.

ಆರ್ಟಿಕಲ್ 370 ಅನ್ನು ಆಗಸ್ಟ್ 5, 2019 ರಂದು ರದ್ದುಗೊಳಿಸಲಾಯಿತು, ಮತ್ತು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಕಾಶ್ಮೀರ ಕಣಿವೆಯಲ್ಲಿ ಪೂರ್ಣ ಸಂವಹನವನ್ನು ಏಕಕಾಲದಲ್ಲಿ ಸ್ಥಗಿತಗೊಳಿಸಲಾಯಿತು, ಇದು ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯಗಳನ್ನು ನಿಗ್ರಹಿಸುವ ಉದ್ದೇಶದಿಂದ ಮಾಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

“ನಮ್ಮ ಸೀಮಿತ ಕಾಳಜಿ ಜನರ ಸುರಕ್ಷತೆ ಮತ್ತು ಸ್ವಾತಂತ್ರ್ಯದ ಬಗ್ಗೆ ಸಮತೋಲನವನ್ನು ಕಂಡುಹಿಡಿಯುವುದು. ನಾಗರಿಕರಿಗೆ ಅವರ ಹಕ್ಕುಗಳನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಮಾತ್ರ. ಏಕೆ ಆದೇಶಿಸಿದ್ದಾರೆ ಎಂಬುದರ ಹಿಂದಿನ ರಾಜಕೀಯ ಉದ್ದೇಶವನ್ನು ನಾವು ಪರಿಶೀಲಿಸುವುದಿಲ್ಲ ”ಎಂದು ನ್ಯಾಯಪೀಠ ಹೇಳಿದೆ.

ಕಾಶ್ಮೀರದ ಸ್ಥಾನಮಾನದ ಬದಲಾವಣೆಯ ವಿರುದ್ಧದ ಪ್ರತಿಭಟನೆಗಳನ್ನು ತಡೆಗಟ್ಟಲು ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಒಳೊಂಡು ನೂರಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಅಂದಿನಿಂದ ಇಂಟರ್ನೆಟ್ ಹೆಚ್ಚಾಗಿ ನಿರ್ಬಂಧಿಸಲ್ಪಟ್ಟಿದೆ.

ಕೇಂದ್ರದ ನಡೆಯನ್ನು ವಿರೋಧಿಸಿ ಅರ್ಜಿಗಳನ್ನು ಕಾಶ್ಮೀರ ಟೈಮ್ಸ್ ಪತ್ರಿಕೆಯ ಸಂಪಾದಕ ಅನುರಾಧಾ ಭಾಸಿನ್ ಮತ್ತು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಇತರರು ಸಲ್ಲಿಸಿದ್ದಾರೆ. ಈ ನಿರ್ಬಂಧಗಳು ತಮ್ಮ ಮಾತಿನ ಮತ್ತು ಅಭಿವ್ಯಕ್ತಿ ಹಕ್ಕುಗಳ ಮೂಲಭೂತ ಹಕ್ಕು ಮತ್ತು ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ಮುಕ್ತವಾಗಿ ಚಲಿಸುವ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರರು ವಾದಿಸಿದರು.

ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 144ರ ಅಡಿಯಲ್ಲಿ ಆದೇಶಗಳಿಗೆ ಅನುಸಾರವಾಗಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ನಿರ್ಬಂಧಗಳನ್ನು ಸಮರ್ಥಿಸಲು ಕೇಂದ್ರವು ಪ್ರಯತ್ನಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...