Homeಚಳವಳಿವಾರದಲ್ಲಿ ಕಾಶ್ಮೀರದಲ್ಲಿನ ನಿರ್ಭಂಧ ಸಡಿಲಿಸಿ : ಮೂಲಭೂತ ಹಕ್ಕುಗಳ ದಮನ ಸಲ್ಲ- ಸುಪ್ರೀಂ ಕೋರ್ಟ್‌

ವಾರದಲ್ಲಿ ಕಾಶ್ಮೀರದಲ್ಲಿನ ನಿರ್ಭಂಧ ಸಡಿಲಿಸಿ : ಮೂಲಭೂತ ಹಕ್ಕುಗಳ ದಮನ ಸಲ್ಲ- ಸುಪ್ರೀಂ ಕೋರ್ಟ್‌

ಅಧಿಕಾರಗಳ ಅನಿಯಂತ್ರಿತ ಆಳ್ವಿಕೆಯಿಂದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧವನ್ನು ಹೇರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲವನ್ನು ಅಮಾನತುಗೊಳಿಸುವ ಆದೇಶಗಳನ್ನು ಕೂಡಲೇ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ಅಂತಹ ಅಮಾನತು ಸೀಮಿತ ಅವಧಿಗೆ ಮಾತ್ರ ಇರುತ್ತದೆ ಮತ್ತು ಇದು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ” ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಆರ್ ಸುಭಾಷ್ ರೆಡ್ಡಿ ಮತ್ತು ಬಿ.ಆರ್. ಗವಾಯಿ ಅವರ ನ್ಯಾಯಪೀಠ ಹೇಳಿದೆ. ಒಂದು ವಾರದೊಳಗೆ ನಿರ್ಬಂಧಗಳನ್ನು ಪರಿಶೀಲಿಸುವಂತೆ ಅದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಕಳೆದ 160 ದಿನಗಳಿಂದ ಕಾಶ್ಮೀರ ಕಣಿವೆ ಸಂವಹನ ನಿರ್ಬಂಧದಲ್ಲಿದೆ.

“ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಸಂವಿಧಾನದ 19 ನೇ ಪರಿಚ್ಚೇದದೊಳಗೆ ಅಂತರ್ಜಾಲದ ಹಕ್ಕನ್ನು ಒಳಗೊಂಡಿದೆ. ಆದ್ದರಿಂದ ಅಂತರ್ಜಾಲದಲ್ಲಿನ ನಿರ್ಬಂಧಗಳು ಆರ್ಟಿಕಲ್ 19 (2) ರ ಅಡಿಯಲ್ಲಿ ಅನುಪಾತದ ತತ್ವಗಳನ್ನು ಅನುಸರಿಸಬೇಕಾಗಿದೆ ”ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಅಧಿಕಾರಗಳ ಅನಿಯಂತ್ರಿತ ಆಳ್ವಿಕೆಯಿಂದ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧವನ್ನು ಹೇರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಮತ್ತು ಸಂವಹನ ನಿರ್ಬಂಧದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಈ ತೀರ್ಪು ಬಂದಿದೆ.

ಆರ್ಟಿಕಲ್ 370 ಅನ್ನು ಆಗಸ್ಟ್ 5, 2019 ರಂದು ರದ್ದುಗೊಳಿಸಲಾಯಿತು, ಮತ್ತು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಕಾಶ್ಮೀರ ಕಣಿವೆಯಲ್ಲಿ ಪೂರ್ಣ ಸಂವಹನವನ್ನು ಏಕಕಾಲದಲ್ಲಿ ಸ್ಥಗಿತಗೊಳಿಸಲಾಯಿತು, ಇದು ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯಗಳನ್ನು ನಿಗ್ರಹಿಸುವ ಉದ್ದೇಶದಿಂದ ಮಾಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

“ನಮ್ಮ ಸೀಮಿತ ಕಾಳಜಿ ಜನರ ಸುರಕ್ಷತೆ ಮತ್ತು ಸ್ವಾತಂತ್ರ್ಯದ ಬಗ್ಗೆ ಸಮತೋಲನವನ್ನು ಕಂಡುಹಿಡಿಯುವುದು. ನಾಗರಿಕರಿಗೆ ಅವರ ಹಕ್ಕುಗಳನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಮಾತ್ರ. ಏಕೆ ಆದೇಶಿಸಿದ್ದಾರೆ ಎಂಬುದರ ಹಿಂದಿನ ರಾಜಕೀಯ ಉದ್ದೇಶವನ್ನು ನಾವು ಪರಿಶೀಲಿಸುವುದಿಲ್ಲ ”ಎಂದು ನ್ಯಾಯಪೀಠ ಹೇಳಿದೆ.

ಕಾಶ್ಮೀರದ ಸ್ಥಾನಮಾನದ ಬದಲಾವಣೆಯ ವಿರುದ್ಧದ ಪ್ರತಿಭಟನೆಗಳನ್ನು ತಡೆಗಟ್ಟಲು ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಒಳೊಂಡು ನೂರಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಅಂದಿನಿಂದ ಇಂಟರ್ನೆಟ್ ಹೆಚ್ಚಾಗಿ ನಿರ್ಬಂಧಿಸಲ್ಪಟ್ಟಿದೆ.

ಕೇಂದ್ರದ ನಡೆಯನ್ನು ವಿರೋಧಿಸಿ ಅರ್ಜಿಗಳನ್ನು ಕಾಶ್ಮೀರ ಟೈಮ್ಸ್ ಪತ್ರಿಕೆಯ ಸಂಪಾದಕ ಅನುರಾಧಾ ಭಾಸಿನ್ ಮತ್ತು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಇತರರು ಸಲ್ಲಿಸಿದ್ದಾರೆ. ಈ ನಿರ್ಬಂಧಗಳು ತಮ್ಮ ಮಾತಿನ ಮತ್ತು ಅಭಿವ್ಯಕ್ತಿ ಹಕ್ಕುಗಳ ಮೂಲಭೂತ ಹಕ್ಕು ಮತ್ತು ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ಮುಕ್ತವಾಗಿ ಚಲಿಸುವ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರರು ವಾದಿಸಿದರು.

ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 144ರ ಅಡಿಯಲ್ಲಿ ಆದೇಶಗಳಿಗೆ ಅನುಸಾರವಾಗಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ನಿರ್ಬಂಧಗಳನ್ನು ಸಮರ್ಥಿಸಲು ಕೇಂದ್ರವು ಪ್ರಯತ್ನಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...