Homeಅಂತರಾಷ್ಟ್ರೀಯಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

- Advertisement -
- Advertisement -

ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಶ್ವದಾದ್ಯಂತ ಇರುವ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ತಿಳಿಸಿದೆ. ಅದಾಗ್ಯೂ, ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತವಿದ್ದು, ಅಲ್ಲಿ 85 ಬಾರಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ಮಾಡಿದೆ. ಇಂಟರ್ನೆಟ್ ಸ್ಥಗಿತ

ಕಳೆದ ಆರು ವರ್ಷಗಳಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ಕಂಡ ದೇಶವೆಂದು ಹೆಸರು ಮಾಡದಿರುವುದು ಇದೇ ಮೊದಲು ಎಂದು ವರದಿ ಹೇಳಿದೆ.

“2023 ರಿಂದ [116 ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು] ಇಂಟರ್‌ನೆಟ್ ಸ್ಥಗಿತಗೊಳಿಸುವಿಕೆ ಸಾಧಾರಣ ಇಳಿಕೆಯ ಹೊರತಾಗಿಯೂ, ಭಾರತವು 2024 ರಲ್ಲಿ 84 ಇಂಟರ್‌ನೆಟ್ ಸ್ಥಗಿತವನ್ನು ಕಂಡಿದೆ. ಇದು ಕಳೆದ ವರ್ಷದ ಪ್ರಜಾಪ್ರಭುತ್ವ ದೇಶಗಳಲ್ಲಿ ಕಂಡ ಅತಿ ಹೆಚ್ಚು ಸ್ಥಗಿತಗಳಾಗಿವೆ” ಎಂದು ವರದಿಯಲ್ಲಿ ಹೇಳಲಾಗಿದೆ.

84 ಸ್ಥಗಿತಗೊಳಿಸುವಿಕೆಗಳಲ್ಲಿ 41 ಘಟನೆಗಳು ಪ್ರತಿಭಟನೆಗಳಿಗೆ ಸಂಬಂಧಿಸಿದ್ದಾಗಿದ್ದರೆ, 23 ಸ್ಥಗಿತಗಳು ಕೋಮು ಹಿಂಸಾಚಾರದಿಂದ ಉಂಟಾಗಿವೆ ಎಂದು ವರದಿ ತಿಳಿಸಿದೆ. ಕಳೆದ ವರ್ಷ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಅಧಿಕಾರಿಗಳು ಐದು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ವಿಧಿಸಿದ್ದರು. ಭಾರತದ 16 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ವಿಧಿಸಲಾಗಿದೆ ಎಂದು ವರದಿ ಉಲ್ಲೇಖಸಿದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಸ್ಥಗಿತಗೊಳಿಸುವಿಕೆ ನಡೆದಿದ್ದು ಮಣಿಪುರದಲ್ಲಾಗಿದ್ದು, ಅಲ್ಲಿ 21 ಬಾರಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ, ನಂತರದ ಸ್ಥಾನದಲ್ಲಿ ಹರಿಯಾಣ (12), ಮತ್ತು ಜಮ್ಮು ಕಾಶ್ಮೀರ (12) ಇವೆ.

“ಇಂಟರ್‌ನೆಟ್‌ ಸ್ಥಗಿತಗೊಳಿಸುವಿಕೆಯು ಭಾರತದ ಜಾಗತಿಕ ನಾಯಕತ್ವದ ಮಹತ್ವಾಕಾಂಕ್ಷೆಗಳಿಗೆ ಹೊಂದಿಕೆಯಾಗುವುದಿಲ್ಲ. ಬೇರೆ ಯಾವುದೇ ಪ್ರಜಾಪ್ರಭುತ್ವದಲ್ಲಿ ಮೇಲ್ವಿಚಾರಣೆ ಅಥವಾ ಹೊಣೆಗಾರಿಕೆ ಇಲ್ಲದೆ ಜನರು ಸಂಪರ್ಕದಿಂದ ವರ್ಷಾನುವರ್ಷ ಕಡಿತಗೊಳ್ಳುವುದಿಲ್ಲ” ಎಂದು ಆಕ್ಸೆಸ್ ನೌನ ಹಿರಿಯ ನೀತಿ ಸಲಹೆಗಾರ ನಮ್ರತಾ ಮಹೇಶ್ವರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೂರಸಂಪರ್ಕ ಕಾಯ್ದೆ 2023 ಮತ್ತು ಟೆಲಿಕಾಂ ಅಮಾನತು ನಿಯಮಗಳು 2024 ರಲ್ಲಿ ಸುರಕ್ಷತಾ ಕ್ರಮಗಳ ಕೊರತೆಯನ್ನು ಸೂಚಿಸುತ್ತಾ, “ಹಕ್ಕುಗಳನ್ನು ಉಲ್ಲಂಘಿಸುವ ಕಾನೂನುಗಳನ್ನು ರದ್ದುಗೊಳಿಸಲು ಮತ್ತು 2025 ಅನ್ನು ಭಾರತದ ಎಲ್ಲಾ ಜನರಿಗೆ ಸ್ಥಗಿತಗೊಳಿಸುವಿಕೆ ಮುಕ್ತ ವರ್ಷವನ್ನಾಗಿ ಮಾಡಲು” ಮಹೇಶ್ವರಿ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ಆದೇಶದ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಾಗಿ ಭಾರತವು 1885 ರ ಟೆಲಿಗ್ರಾಫ್ ಕಾಯ್ದೆಯ ವಸಾಹತುಶಾಹಿ ಯುಗದ ನಿಬಂಧನೆಗಳನ್ನು ಉಳಿಸಿಕೊಂಡಿದ್ದು, ಇದರ ಬಗ್ಗೆ ಹಲವಾರು ಜನರು ಟೀಕೆಗಳನ್ನು ವ್ಯಕ್ತಪಡಿಸುತ್ತಲೆ ಇದ್ದಾರೆ. ಈ ವರೆಗೆ ಸ್ಥಗಿತಗೊಳಿಸುವ ಆದೇಶಗಳನ್ನು ಪರಿಶೀಲಿಸಲು ಸ್ವತಂತ್ರ ಮೇಲ್ವಿಚಾರಣಾ ಕಾರ್ಯವಿಧಾನದಂತಹ ಸುರಕ್ಷತಾ ಕ್ರಮಗಳನ್ನು ಸೇರಿಸದೆ ಇವುಗಳನ್ನು ಮಾಡಲಾಗುತ್ತಿದೆ ಎಂದು ಟೀಕಾಕಾರರ ಆಕ್ಷೇಪವಾಗಿದೆ.

ಪ್ರಸ್ತುತ, ಸ್ಥಗಿತಗೊಳಿಸುವ ಆದೇಶಗಳ ಕಾನೂನು ಸಿಂಧುತ್ವವನ್ನು ಕೇಂದ್ರ ಮತ್ತು ರಾಜ್ಯಗಳಲ್ಲಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಪರಿಶೀಲಿಸುತ್ತದೆ.

ಜಗತ್ತಿನಾದ್ಯಂತ ಇಂಟರ್ನೆಟ್ ಸ್ಥಗಿತಗೊಳಿಸುವಿಕೆ

ಕಳೆದ ವರ್ಷ 54 ದೇಶಗಳಲ್ಲಿ 296 ಕ್ಕೂ ಹೆಚ್ಚು ಸರ್ಕಾರ ವಿಧಿಸಿದ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು ಕಂಡುಬಂದವು. ಏಷ್ಯಾ ಪೆಸಿಫಿಕ್‌ನ 11 ದೇಶಗಳು ಅಥವಾ ಪ್ರದೇಶಗಳಲ್ಲಿ ಇಂತಹ 202 ಅಡಚಣೆಗಳು ದಾಖಲಾಗಿವೆ. “ಮ್ಯಾನ್ಮಾರ್, ಭಾರತ ಮತ್ತು ಪಾಕಿಸ್ತಾನ ಒಟ್ಟಾಗಿ 2024 ರಲ್ಲಿ ದಾಖಲಾದ ಎಲ್ಲಾ ಸ್ಥಗಿತಗೊಳಿಸುವಿಕೆಗಳಲ್ಲಿ ಶೇಕಡಾ 64 ಕ್ಕಿಂತ ಹೆಚ್ಚು” ಎಂದು ಆಕ್ಸೆಸ್ ನೌ ಹೇಳಿದೆ.

ಹಿಂಸಾಚಾರ ಮತ್ತು ಸಂಘರ್ಷದ ಸಂದರ್ಭಗಳಲ್ಲಿ ಅಧಿಕಾರಿಗಳು ಹೆಚ್ಚಿನ ಇಂಟರ್ನೆಟ್ ಸ್ಥಗಿತಗೊಳಿಸಿದ್ದರು. ಭಾರತ ಸೇರಿದಂತೆ 11 ದೇಶಗಳಲ್ಲಿ 103 ಕ್ಕೂ ಹೆಚ್ಚು ಸಂಘರ್ಷ-ಸಂಬಂಧಿತ ಸ್ಥಗಿತಗೊಳಿಸುವಿಕೆಗಳು ಸಂಭವಿಸಿವೆ. ಪ್ರತಿಭಟನೆಗಳು ಮತ್ತು ಅಸ್ಥಿರತೆ, ಪರೀಕ್ಷೆಗಳು, ಚುನಾವಣೆಗಳ ಸಮಯದಲ್ಲಿ ಸ್ಥಗಿತಗೊಳಿಸುವಿಕೆಗಳು ಮತ್ತು ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಹಾಕಲು ಇವುಗಳನ್ನು ಮಾಡಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

“ಇಂಟರ್‌ನೆಟ್ ಸ್ಥಗಿತಗೊಳಿಸುವಿಕೆಯು ಸಮಾಜಗಳನ್ನು ಅಸ್ಥಿರಗೊಳಿಸುತ್ತದೆ, ಡಿಜಿಟಲ್ ಪ್ರಗತಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಇಡೀ ಸಮುದಾಯಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಗೆ ಶಿಕ್ಷೆಯ ರಕ್ಷಣೆಯ ಮುಸುಕನ್ನು ಒದಗಿಸುತ್ತದೆ. ಮ್ಯಾನ್ಮಾರ್‌ನಿಂದ ಪಾಕಿಸ್ತಾನದವರೆಗಿನ ಅಧಿಕಾರಿಗಳು ಪ್ರಪಂಚದ ಉಳಿದ ಭಾಗಗಳಿಂದ ಜನರನ್ನು ನಿರ್ಭಯದಿಂದ ಪ್ರತ್ಯೇಕಿಸುತ್ತಿದ್ದಾರೆ, ಇದು ಏಷ್ಯಾದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಸರ್ವಾಧಿಕಾರತ್ವವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ಸೆಸ್ ನೌ ಸಂಸ್ಥೆಯ ಏಷ್ಯಾ ಪೆಸಿಫಿಕ್ ನೀತಿ ನಿರ್ದೇಶಕ ರಾಮನ್ ಜಿತ್ ಸಿಂಗ್ ಚಿಮಾ ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...