Homeಮುಖಪುಟಜಮ್ಮು ಕಾಶ್ಮೀರ: ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್‌ನೆಟ್ ಸ್ಥಗಿತ

ಜಮ್ಮು ಕಾಶ್ಮೀರ: ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್‌ನೆಟ್ ಸ್ಥಗಿತ

- Advertisement -
- Advertisement -

ಸೇನಾ ಸಿಬ್ಬಂದಿ ವಿಚಾರಣೆಗೆಂದು ಕರೆದುಕೊಂಡು ಹೋಗಿ ಮೂವರು ನಾಗರಿಕರಿಗೆ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿ.23) ಬೆಳಿಗ್ಗೆಯಿಂದ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಭಯೋತ್ಪಾದಕ ದಾಳಿಯ ಬಳಿಕ ಮೂವರು ನಾಗರಿಕರು ಶವವಾಗಿ ಪತ್ತೆಯಾಗಿದ್ದರು. ವಿಚಾರಣೆಗಾಗಿ ಸೇನಾ ಸಿಬ್ಬಂದಿ ಕರೆದುಕೊಂಡು ಹೋದ ಮೂವರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ ಸೇನಾ ಸಿಬ್ಬಂದಿ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂದು ಆರೋಪಿಸಲಾದ ವಿಡಿಯೋವೊಂದು ಇಂಟರ್‌ನೆಟ್‌ನಲ್ಲಿ ಹರಿದಾಡಿದೆ. ಇದರಿಂದ ಜನರು ಉದ್ರಿಕ್ತಗೊಂಡಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿಡಲು ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಸೇನೆ ಮತ್ತು ಪೊಲೀಸರು ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಭದ್ರತಾ ಪಡೆಗಳ ಮೇಲೆ ಕೋಪಗೊಂಡಿರುವ ಜನರು ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳದಂತೆ ಹದ್ದಿಣ ಕಣ್ಣಿಟ್ಟಿದ್ದಾರೆ.

ಸೇನೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಎರಡೂ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ.

ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಸೇನೆ ಮತ್ತು ಪೊಲೀಸರು ಹುಡುಕಾಟ ಕಾರ್ಯಾಚರಣೆ ನಡೆಸಿದ್ದರು. ಈ ನಡುವೆ ಮೂವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇವರನ್ನು ಸೇನೆಯವರು ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದರು. ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ ಎಂದು ಸುದ್ದಿ ಹಬ್ಬಿದೆ. ಮೂವರ ಮೃತದೇಹಗಳನ್ನು ಬಿಗಿ ಭದ್ರತೆಯ ನಡುವೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮೃತರನ್ನು ಬುಫ್ಲಿಯಾಝ್‌ನ ಟೋಪಾ ಪೀರ್ ಗ್ರಾಮದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ಸೇನೆಯವರೇ ಹತ್ಯೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಸೇನಾ ಸಿಬ್ಬಂದಿ ಮೇಲಿ ಭಯೋತ್ಪಾದಕ ದಾಳಿ ನಡೆಸಿದವರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ತೀವ್ರ ಹುಡುಕಾಟ ಮುಂದುವರೆಸಿವೆ. ದಾಳಿಯ ಬಳಿಕ ಭಯೋತ್ಪಾದಕರು ಇಬ್ಬರು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ವಿರೋಪಗೊಳಿಸಿ ಅವರಿಂದ ಶಸ್ತ್ರಾಸ್ತ್ರಗಳನ್ನು ಕದ್ದೊಯ್ದಿದ್ದಾರೆ ಎಂದು ಹೇಳಲಾಗ್ತಿದೆ.

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಯಲ್ಲಿ ಗುರುವಾರ ಭಾರತೀಯ ಸೇನೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕ ಗುಂಪು ನಡೆಸಿದ ಹೊಂಚು ದಾಳಿಯಲ್ಲಿ ಐವರು ಸೈನಿಕರು ಮೃತಪಟ್ಟಿದ್ದಾರೆ. ದೇರಾ ಕಿ ಗಾಲಿ ಮತ್ತು ಬಲ್ಫಿಯಾಜ್ ನಡುವಿನ ಧಾತ್ಯರ್ ಮೊರಹ್ ಎಂಬಲ್ಲಿ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ : ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...