Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...