Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...