Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...