Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...