Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...