Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...