Homeರಾಷ್ಟ್ರೀಯಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಇರಿದು ಕೊಂದಿರುವ ಘಟನೆ ಮೇ 20ರ ಶುಕ್ರವಾರದ ಸಂಜೆ ನಡೆದಿದೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕೊಲೆಯಾದ ಯುವಕನನ್ನು ನೀರಜ್ ಪನ್ವಾರ್ ಎಂದು ಗುರುತಿಸಲಾಗಿದೆ. ಹತ್ಯೆಯಲ್ಲಿ ಐವರು ಭಾಗಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಐದನೆಯವನು ಪರಾರಿಯಾಗಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಲ್ವರು ದಾಳಿಕೋರರನ್ನು ರೋಹಿತ್, ರಂಜಿತ್, ಕೌಶಿಕ್ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳನ್ನು ತೆಲಂಗಾಣ-ಕರ್ನಾಟಕ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹೈದರಾಬಾದ್‌ನಲ್ಲಿ ಇತ್ತೀಚಿಗೆ, ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ದಲಿತ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದು ನಡೆದು ಸುಮಾರು ಹದಿನೈದು ದಿನಗಳ ನಂತರ ಮತ್ತೊಂದು ಅಮಾನುಷ ಘಟನೆ ಸಂಭವಿಸಿದೆ.

ಶುಕ್ರವಾರ ರಾತ್ರಿ 7:30 ರ ಸುಮಾರಿಗೆ ಬೇಗಂ ಬಜಾರ್ ಮೀನು ಮಾರುಕಟ್ಟೆಯಲ್ಲಿ ಮೃತ ನೀರಜ್ ಪನ್ವಾರ್ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಗುಪ್ತರ ‘ಸವರ್ಣ ಯುಗ’ದಲ್ಲಿ ಅಸ್ಪೃಶ್ಯತೆಯ ಉಗಮ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕೊಲೆಗೀಡಾದ ಯುವಕ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ಮಾಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ನೀರಜ್‌ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ನೀರಜ್‌ ಅವರು ಸಂಜನಾ ಅವರನ್ನು ಮದುವೆಯಾಗಿದ್ದರು. ಆದರೆ ಸಂಜನಾ ಅವರ ಕುಟುಂಬವು ಅವರ ಮದುವೆಯನ್ನು ವಿರೋಧಿಸಿತ್ತು. ತನ್ನ ಗಂಡನ ಹತ್ಯೆಯಲ್ಲಿ ತನ್ನ ಸೋದರಸಂಬಂಧಿಯ (ಸಹೋದರ) ಪಾತ್ರವನ್ನು ಸಂಜನಾ ಶಂಕಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದ್ದು, ದಾಳಿ ಮಾಡಿರುವವರಿಗೆ ಮರಣದಂಡನೆ ವಿಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಮಾರಣಾಂತಿಕ ದಾಳಿಗೆ ಮುನ್ನ ತನ್ನ ಮಗನಿಗೆ ಯಾವುದೇ ಬೆದರಿಕೆ ಇರಲಿಲ್ಲ ಎಂದು ನೀರಜ್ ತಂದೆ ಹೇಳಿದ್ದು, ಆದರೆ ಹತ್ಯೆಯು ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿ ನಡೆದಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

“ನನ್ನ ಮಗ ಕಳೆದ ವರ್ಷ ಏಪ್ರಿಲ್‌ನಲ್ಲಿ ಬೇರೆ ಜಾತಿಯ ಯುವತಿಯನ್ನು ಮದುವೆಯಾಗಿದ್ದು, ದಂಪತಿಗೆ ಎರಡೂವರೆ ತಿಂಗಳ ಮಗನಿದ್ದಾನೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗನ ಮೇಲೆ ಐವರು ಹಲ್ಲೆ ನಡೆಸಿದ್ದಾರೆ. ಅವರಿಗೆ ಯಾವುದೇ ಬೆದರಿಕೆ ಬಂದಿಲ್ಲ. ನಾವು ರಕ್ಷಣೆ ಕೋರಿ ಒಂದು ವರ್ಷದ ಹಿಂದೆ ಪೊಲೀಸರನ್ನು ಸಂಪರ್ಕಿಸಿದ್ದೆವು’’ ಎಂದು ಸಂತ್ರಸ್ತ ಯುವಕನ ತಂದೆ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

“ಇಂದು ಸಂಜೆ 7:30 ರ ಸುಮಾರಿಗೆ, ನಾವು ನಮ್ಮ ಸಂಬಂಧಿಕರ ಅಂಗಡಿಯಿಂದ ಹಿಂತಿರುಗುತ್ತಿದ್ದೆವು. ಅಲ್ಲಿಂದ ಹೊರಟ ಐದು ನಿಮಿಷಗಳ ಅಂತರದಲ್ಲಿ, ದುಷ್ಕರ್ಮಿಗಳು ನನ್ನ ಮಗನನ್ನು ಇರಿದು ಕೊಂದರು” ಎಂದು ತಂದೆ ಘಟನೆಯನ್ನು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...