Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...