Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...