Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...