Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...