Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...