Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...