Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...