Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...