Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....