Homeಕರ್ನಾಟಕಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಸಂದರ್ಶನ: ಕಾಂಗ್ರೆಸ್ ತತ್ವ ಸಿದ್ಧಾಂತ ಇಷ್ಟ, ಅದಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ- ಪೂರ್ವಜ್ ವಿಶ್ವನಾಥ್‌

ಅಪ್ಪ ಬಿಜೆಪಿಯಲ್ಲಿದ್ದು, ಮಗ ಕಾಂಗ್ರೆಸ್‌ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ಪೂರ್ವಜ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದಾರೆ.

- Advertisement -
- Advertisement -

‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವನಾಥ್‌ ಅವರು ಬಿಜೆಪಿಯಲ್ಲಿದ್ದು, ಅವರ ಪುತ್ರ ಕಾಂಗ್ರೆಸ್ ಸೇರುತ್ತಿರುವುದು ಸ್ವಾರಸ್ಯಕರ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಪೂರ್ವಜ್ ಮಾತನಾಡಿದ್ದಾರೆ.

* ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದೀರಿ. ಇದಕ್ಕೆ ಪ್ರೇರಣೆ ಏನು?

ಪೂರ್ವಜ್‌: ನಾನು ಹುಟ್ಟಿದಾಗಿನಿಂದ ಬುದ್ಧಿ ಬರುವತನಕ ಕಾಂಗ್ರೆಸ್ ನೋಡಿಕೊಂಡೇ ಬೆಳೆದವನು. ಕಾಂಗ್ರೆಸ್ ತತ್ವ ಸಿದ್ಧಾಂತಗಳು ನನಗಿಷ್ಟ. ನನ್ನ ಅಚ್ಚುಮೆಚ್ಚಿನ ಪಕ್ಷ ಕಾಂಗ್ರೆಸ್. ಎಸ್.ಎಂ.ಕೃಷ್ಣ, ಧರಂಸಿಂಗ್‌, ಸಿದ್ದರಾಮಯ್ಯನವರ ಆಡಳಿತ ವೈಖರಿ ನನಗೆ ಪ್ರಿಯವಾದದ್ದು. ಕಾಂಗ್ರೆಸ್‌ನಲ್ಲಿರುವ ನಾಯಕರು ನನಗೆ ತುಂಬಾ ಇಷ್ಟ. ವಿಶೇಷವಾಗಿ ಸಿದ್ದರಾಮಯ್ಯನವರ ಮೇಲೆ ಅಪಾರ ಪ್ರೀತಿ. ನನ್ನ ತಂದೆ ಮತ್ತು ಸಿದ್ದರಾಮಯ್ಯನವರು ಒಳ್ಳೆಯ ಸ್ನೇಹಿತರಾಗಿದ್ದರು. ಈ ಭಾರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಪಯಣದಲ್ಲಿ ನಾನು ಕೂಡ ಕಾಂಗ್ರೆಸ್ ಜೊತೆಗಿರುತ್ತೇನೆ ಎಂಬ ಖುಷಿ ನನ್ನದಾಗುತ್ತಿದೆ.

* ನಿಮ್ಮ ತಂದೆಯವರು ಬಿಜೆಪಿಯಲ್ಲಿ ಎಂಎಲ್‌ಸಿಯಾಗಿದ್ದಾರೆ. ನೀವು ಕಾಂಗ್ರೆಸ್‌ ಸೇರುತ್ತಿದ್ದೀರಿ…

ಪೂರ್ವಜ್‌: ನನ್ನ ತಂದೆಯವರು ಬಿಜೆಪಿಯಲ್ಲಿದ್ದು ಮಾಡಬೇಕಿರುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಸಾಗಬೇಕೆಂಬುದು ನನ್ನ ವೈಯಕ್ತಿಕ ನಿರ್ಧಾರ. ಅವರು ಬಿಜೆಪಿಯಲ್ಲಿರುವ ಕಾರಣ, ನಾನು ಕೂಡ ಬಿಜೆಪಿಯಲ್ಲಿರಬೇಕೆಂಬ ಕಟ್ಟುಪಾಡುಗಳು ನಮ್ಮ ಮನೆಯಲ್ಲಿ ಇಲ್ಲ. ನನ್ನ ತಂದೆಯವರಿಗೆ ವಿಚಾರವನ್ನು ತಿಳಿಸಿಯೇ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ. ನಿನ್ನ ಬೆಳವಣಿಗೆಗೆ ಎಲ್ಲಿ ಅನುಕೂಲವಿದೆಯೋ ಅಲ್ಲಿಗೆಯೇ ಹೋಗಪ್ಪ ಎಂದರು. ನನ್ನ ವೈಯಕ್ತಿಕ ಆಯ್ಕೆಗೆ ಮೊದಲಿನಿಂದಲೂ ಸ್ವತಂತ್ರವನ್ನು ನನ್ನ ತಂದೆಯವರು ನೀಡಿದ್ದಾರೆ.

* ನಿಮ್ಮ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿದೆ?

ಸಿದ್ದರಾಮಯ್ಯನವರು ಈಗ ಬ್ಯುಸಿಯಾಗಿದ್ದಾರೆ. ಪ್ರತಿದಿನ ಒಂದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ನೇರವಾಗಿಯೇ ಅವರನ್ನು ಭೇಟಿಯಾಗಿ ಅವರೊಂದಿಗೆ ಕುಳಿತು ಮಾತನಾಡಿಲ್ಲ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಷಯ ತಿಳಿಸಿದೆ. ಯತೀಂದ್ರ ಅವರು ಸಿದ್ದರಾಮಯ್ಯನವರಲ್ಲಿ ಪ್ರಸ್ತಾಪಿಸಿದಾಗ, ನನ್ನ ನಿರ್ಧಾರಕ್ಕೆ ಖುಷಿ ಪಟ್ಟಿದ್ದಾರೆಂದು ತಿಳಿಯಿತು. ಈ ಸಕಾರಾತ್ಮಕವಾದ ಪ್ರತಿಕ್ರಿಯೆ ಸಿಕ್ಕ ಮೇಲೆಯೇ ನಾನು ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರ ಬಿಡುವು ನೋಡಿಕೊಂಡು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಏರ್ಪಡಿಸಲಿದ್ದೇನೆ. ನನ್ನ ಜೊತೆಯಲ್ಲಿರುವ ಅನೇಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಹೋಗುತ್ತೇನೆ.

* ಅಪ್ಪ ಒಂದು ಕಡೆ, ಮಗ ಒಂದು ಕಡೆ ಎಂಬುದು ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವೇ?

ಪೂರ್ವಜ್‌: ಒಂದು ಕ್ಷೇತ್ರವೆಂದ ಮೇಲೆ ಒಬ್ಬ ವ್ಯಕ್ತಿಯನ್ನು ಪ್ರೀತಿ ಮಾಡುವ ಜನ, ಒಂದು ಪಕ್ಷವನ್ನು ಪ್ರೀತಿ ಮಾಡುವ ಜನ ಇದ್ದೇ ಇರುತ್ತಾರೆ. ನನ್ನನ್ನು ಇಷ್ಟಪಡುವ ಜನರು, ನಮ್ಮ ಪಕ್ಷವನ್ನು ಪ್ರೀತಿ ಮಾಡುವವರು ನಮ್ಮ ಬೆನ್ನ ಹಿಂದೆ ಇದ್ದಾರೆ. ನನ್ನ ನಿರ್ಧಾರದಿಂದ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ.

* ಹುಣಸೂರು ಕ್ಷೇತ್ರವನ್ನು ನಿಮ್ಮ ತಂದೆಯವರು ಪ್ರತಿನಿಧಿಸಿದ್ದರು. ಈಗ ಕಾಂಗ್ರೆಸ್ ಶಾಸಕರೇ ಅಲ್ಲಿದ್ದಾರೆ. ಕ್ಷೇತ್ರದಲ್ಲಿ ಏನೆಲ್ಲ ಕೆಲಸಗಳು ಆಗಬೇಕಿದೆ?

ಪೂರ್ವಜ್‌: ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್‌ ಶಾಸಕರಾಗಿದ್ದಾರೆ. ಒಳ್ಳೆಯ ಆಡಳಿತವನ್ನು ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುವ ಎಲ್ಲ ಸಾಧ್ಯತೆಗಳನ್ನು ನಾನು ನೋಡಿದ್ದೇನೆ. ನನ್ನ ತಂದೆಯವರು ಇಲ್ಲಿ ಗೆದ್ದಿದ್ದರು. ಅವರು ಹೆಚ್ಚು ಕಾಲ ಅಧಿಕಾರದಲ್ಲಿರಲು ಸಾಧ್ಯವಾಗಲಿಲ್ಲ ಎಂಬ ಬೇಜಾರಿದೆ ಬಿಟ್ಟರೆ, ಕ್ಷೇತ್ರದ ಅಭಿವೃದ್ಧಿ ಚೆನ್ನಾಗಿಯೇ ಆಗಿದೆ. ಹುಣಸೂರು ತಾಲ್ಲೂಕು ಮುಂದೆ ಜಿಲ್ಲೆಯಾಗಬೇಕೆಂಬುದು ನನ್ನ ಆಶಯವೂ ಹೌದು.

* ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದ್ದೀರಿ. ಏನೆಲ್ಲ ಆಲೋಚನೆಗಳನ್ನು ಮಾಡಿದ್ದೀರಿ.

ಪೂರ್ವಜ್‌: ಕಾಂಗ್ರೆಸ್ ಯುವ ಘಟಕವನ್ನು ಬಲಗೊಳಿಸುವುದು ನಮ್ಮ ಗುರಿ. ಮೈಸೂರು ಭಾಗವನ್ನೇ ಗಮನಿಸುವುದಾದರೆ ಸುನೀಲ್ ಬೋಸ್‌, ಯತೀಂದ್ರ ಸಿದ್ದರಾಮಯ್ಯ, ರವೀಶ್‌, ಅನಿಲ್‌ ಚಿಕ್ಕಮಾದು- ಇವರೆಲ್ಲ ಕಾಂಗ್ರೆಸ್‌ ಯುವಮುಖವಾಗಿ ಹೊಮ್ಮಿದ್ದಾರೆ. ಇವರ ಜೊತೆ ನಾನೂ ಸೇರಿಕೊಂಡು ಮತ್ತಷ್ಟು ಯುವಕರನ್ನು ಪಕ್ಷಕ್ಕೆ ಕರೆತರುತ್ತೇವೆ.

* ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಈಗಲೇ ನೀವೆಲ್ಲ ಮಾತನಾಡುತ್ತಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾಗುವುದಿಲ್ಲವೇ?

ಪೂರ್ವಜ್‌: ದಾವಣಗೆರೆ ಕಾರ್ಯಕ್ರಮವನ್ನು ನೋಡಿದ್ದೀರಿ. ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗುತ್ತಿರುವ ಸೂಚನೆ ಸಿಕ್ಕಿದೆ. ಇಲ್ಲಿ ಬಣಗಳ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರ ಅಭಿಮಾನಿಯಾಗಿರುವ ನನಗೆ ಅವರು ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಅಂದ ಮಾತ್ರಕ್ಕೆ ಅವರಷ್ಟೇ ಮುಖ್ಯಮಂತ್ರಿಯಾಗಬೇಕೆಂಬ ಧೋರಣೆ ಇಲ್ಲ. ಮೈಸೂರು ಭಾಗದವರಾದ ಸಿದ್ದರಾಮಯ್ಯನವರು ಸಿಎಂ ಆದರೆ ಇಲ್ಲಿನ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇಡೀ ಕರ್ನಾಟಕ್ಕೆ ಅನುಕೂಲವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....