Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...