Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...